

ಮಂಗಳೂರು: ಆಟೋದಲ್ಲಿ ಕುಕ್ಕರ್ಬಾಂಬ್
ಸ್ಫೋಟಗೊಂಡ ಸ್ಥಳಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ
ಅವರು ಇಂದು ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಶಾಸಕ ಡಾ. ವೈ. ಭರತ್ ಶೆಟ್ಟಿ, ಡಿಜಿಪಿ ಪ್ರವೀಣ್ ಸೂದ್,ಐಜಿಪಿ ಚಂದ್ರಗುಪ್ತ, ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ಜಿಲ್ಲಾಧಿಕಾರಿ ರವಿಕುಮಾರ್, ಡಿಸಿಪಿ ಅನ್ನು ಕುಮಾರ್, ದಿನೇಶ್, ಎಸಿಪಿ ಪಿ.ಎ. ಹೆಗ್ಡೆ ಮತ್ತಿತರರು ಈ ವೇಳೆ ಹಾಜರಿದ್ದರು.


