ಮಂಡೆಕೋಲಿನಲ್ಲಿ  ಒಳನಾಡು ಮೀನುಗಾರಿಕೆಗೆ ಅವಕಾಶಗಳು ಹಾಗೂ ಇಲಾಖಾ ಸವಲತ್ತುಗಳ ಮಾಹಿತಿ ಕಾರ್ಯಾಗಾರ.

ಮಂಡೆಕೋಲಿನಲ್ಲಿ ಒಳನಾಡು ಮೀನುಗಾರಿಕೆಗೆ ಅವಕಾಶಗಳು ಹಾಗೂ ಇಲಾಖಾ ಸವಲತ್ತುಗಳ ಮಾಹಿತಿ ಕಾರ್ಯಾಗಾರ.

ಅಡಿಕೆ ಕೃಷಿಗೆ ಎಲೆಚುಕ್ಕಿ ರೋಗ, ಹಳದಿ ಎಲೆ ರೋಗ ಕಾಣಿಸಿಕೊಂಡಿದ್ದು, ಅಡಿಕೆ ಬೆಳೆಗಾರರು ಆತಂಕಕ್ಕೀಡಾಗಿದ್ದು, ಪರ್ಯಾಯವಾಗಿ ಮೀನುಕೃಷಿ ಮಾಡುವ ಮೂಲಕ ಹೆಚ್ಚಿನ ಆದಾಯ ಗಳಿಸಲು ಸಾಧ್ಯ ಎಂದು ರಾಜ್ಯ ಮೀನುಗಾರಿಕಾ ನಿಗಮದ ಅಧ್ಯಕ್ಷ ಎ.ವಿ‌. ತೀರ್ಥರಾಮ ಹೇಳಿದರು.

ಅವರು ಮಂಡೆಕೋಲಿನ ಪ್ರಾ‌.ಕೃ.ಪ.ಸ.ಸಂಘದ ಅಮೃತ ಸಭಾಭವನದಲ್ಲಿ ಸುಳ್ಯ ಮಹಶೀರ್ ಮತ್ಸ್ಯ ರೈತ ಉತ್ಪಾದಕ ಕಂಪನಿ ಲಿ. ಮತ್ತು ದ.ಕ. ಜಿಲ್ಲಾ ಮೀನುಗಾರಿಕಾ ಇಲಾಖೆ ಇದರ ಜಂಟಿ ಆಶ್ರಯದಲ್ಲಿ ಮಂಡೆಕೋಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಹಕಾರದೊಂದಿಗೆ ನ.27ರಂದು ನಡೆದ ಒಳನಾಡು ಮೀನುಗಾರಿಕೆಗೆ ಅವಕಾಶಗಳು ಹಾಗೂ ಇಲಾಖಾ ಸವಲತ್ತುಗಳ ಮಾಹಿತಿ ಕಾರ್ಯಾಗಾರವನ್ನು ಉದ್ಘಾಟಿಸಿ, ಮಾತನಾಡಿದರು.

*ಸುಳ್ಯ ಮಹಶೀರ್ ಮತ್ಸ್ಯ ರೈತ ಉತ್ಪಾದಕ ಕಂಪೆನಿ ಅಧ್ಯಕ್ಷ ಮಹೇಶ್ ಕುಮಾರ್ ಮೇನಾಲ ಅವರು ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜಿ.ಪಂ. ಮಾಜಿ ಸದಸ್ಯ ಹರೀಶ್ ಕಂಜಿಪಿಲಿ, ಪುತ್ತೂರ ಮುತ್ತು ರೈತ ಉತ್ಪಾದಕ ಕಂಪೆನಿ ಅಧ್ಯಕ್ಷ ರಾಧಾಕೃಷ್ಣ ಬೂಡಿಯಾರ್, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ ಎನ್., ಮಂಡೆಕೋಲು ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ರಾಮಕೃಷ್ಣ ರೈ, ಮೀನುಗಾರಿಕೆ ವಿದ್ಯಾಲಯದ ಪ್ರೋಪೆಸರ್ ಡಾ. ಮಂಜ ನಾಯಕ್, ಮಂಡೆಕೋಲು ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ವಿನುತ ಪಾತಿಕಲ್ಲು, ಡೀನ್ ಮೀನುಗಾರಿಕೆ ವಿದ್ಯಾಲಯದ ಡಾ. ಶಿವಕುಮಾರ್ ಮಗದ, ಮೀನುಗಾರಿಕಾ ಉಪನಿರ್ದೇಶಕ ಡಾ. ಸುಶ್ಮಿತಾ ರಾವ್, ಮೀನುಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಹರೀಶ್ ಕುಮಾರ್, ದ.ಕ.‌ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ. ಟಿ.ಜೆ. ರಮೇಶ, ಪೋರ್ಥ್ ಜನರೇಶನ್ ಸಂಪನ್ಮೂಲ ಸಂಸ್ಥೆಯ ಮುಖ್ಯಸ್ಥ ವಿಶ್ವನಾಥ ರೆಡ್ಡಿ, ವೇದಿಕೆಯಲ್ಲಿ ಉಪಸ್ಥಿತರಿದ್ದರು. *ಮಹಶೀರ್ ಮತ್ಸ್ಯ ರೈತ ಉತ್ಪಾದಕ ಕಂಪನಿಯ ಉಪಾಧ್ಯಕ್ಷ ಸುರೇಶ್ ಕಣೆಮರಡ್ಕ ಸ್ವಾಗತಿಸಿ, ಅಧ್ಯಕ್ಷ ಮಹೇಶ್ ಕುಮಾರ್ ಮೇನಾಲ ವಂದಿಸಿದರು*. ಮಂಡೆಕೋಲು ಪ್ರಾ.ಕೃ.ಪ.ಸ.ಸಂಘದ ಮಾಜಿ ಅಧ್ಯಕ್ಷ ಶಿವಪ್ರಸಾದ್ ಉಗ್ರಾಣಿಮನೆ ಹಾಗೂ ಬಾಲಕೃಷ್ಣ ಮಾವಂಜಿ ಕಾರ್ಯಕ್ರಮ ನಿರೂಪಿಸಿದರು.
ಸಭಾ ಕಾರ್ಯಕ್ರಮದ ಬಳಿಕ ಮೀನುಗಾರಿಕಾ ವಿದ್ಯಾಲಯ ಹಾಗೂ ಇಲಾಖೆಯ ತಜ್ಞರು ಒಳನಾಡು ಮೀನುಗಾರಿಕೆಗೆ ಅವಕಾಶಗಳು ಹಾಗೂ ಇಲಾಖಾ ಸವಲತ್ತುಗಳ ಕುರಿತು ಮಾಹಿತಿ ಕಾರ್ಯಾಗಾರ ನಡೆಸಿದರು. ಈ ಸಂದರ್ಭದಲ್ಲಿ *ಸುಳ್ಯ ಮಹಶೀರ್ ಮತ್ಸ್ಯ ರೈತ ಉತ್ಪಾದಕ ಕಂಪನಿಯ ನಿರ್ದೇಶಕರುಗಳಾದ ಸುಪ್ರೀತ್ ಮೋಂಟಡ್ಕ, ಚನಿಯ ಕಲ್ತಡ್ಕ, ಅಶೋಕ ಅಡ್ಕಾರು, ಚಂದ್ರಶೇಖರ ನೆಡಿಲು, ಪ್ರಶಾಂತ್ ಅಂಬೆಕಲ್ಲು, ನವೀನ ಚಾತುಬಾಯಿ , ಶ್ರೀಮತಿ ಶಶಿಕಲಾ ನೀರಬಿದಿರೆ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಧನುಷ್ ಪೆರುಂಬಾರು ಸೇರಿದಂತೆ ಮಂಡೆಕೋಲು ಪ್ರಾ.ಕೃ.ಪ.ಸ.ಸಂಘದ ನಿರ್ದೇಶಕರುಗಳು, ಮಂಡೆಕೋಲು ಗ್ರಾ.ಪಂ. ಸದಸ್ಯರುಗಳು ಹಾಗೂ ಕೃಷಿಕರು ಉಪಸ್ಥಿತರಿದ್ದರು*.

ರಾಜ್ಯ