ಉಪ್ಪಿನಂಗಡಿ: ರಸ್ತೆ ಅಪಘಾತ: ಆಟೋ ಚಾಲಕ ಸ್ಥಳದಲ್ಲೇ ಮೃತ್ಯು.ನ

ಉಪ್ಪಿನಂಗಡಿ: ರಸ್ತೆ ಅಪಘಾತ: ಆಟೋ ಚಾಲಕ ಸ್ಥಳದಲ್ಲೇ ಮೃತ್ಯು.ನ

ಉಪ್ಪಿನಂಗಡಿ ಬಳಿಯ ನೆಕ್ಕಿಲಾಡಿಯ ಬೊಳ್ಳಾರು ಸಮೀಪ ಎಟಿಎಂನ ಹಣ ಸಾಗಿಸುವ ವಾಹನ ಹಾಗೂ ಆಟೋ ರಿಕ್ಷಾ ನಡುವೆ ಢಿಕ್ಕಿ ಸಂಭವಿಸಿ ಆಟೋ ಚಾಲಕ
ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.ಮೃತ ರಿಕ್ಷಾ ಚಾಲಕನನ್ನು ಉಪ್ಪಿನಂಗಡಿಯ ಸುಭಾಶ್ ನಗರ ನಿವಾಸಿ, ವಾಸು ಪೂಜಾರಿ (50 ವರ್ಷ) ಎಂದು ಗುರುತಿಸಲಾಗಿದೆ. ಎಟಿಎಂನ ಹಣ ಸಾಗಿಸುವ ವಾಹನ
ಉಪ್ಪಿನಂಗಡಿಯಿಂದ ಮಂಗಳೂರು ಕಡೆಗೆ ಸಾಗುತ್ತಿದ್ದು, ಆಟೋ ರಿಕ್ಷಾ ಉಪ್ಪಿನಂಗಡಿ ಕಡೆಗೆ ತೆರಳುತ್ತಿತ್ತು. ಘಟನೆಯಲ್ಲಿ ಅಟೋ ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿದೆ .ಇನ್ನು ಘಟನಾ ಸ್ಥಳಕ್ಕೆ ಉಪ್ಪಿನಂಗಡಿ
ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ರಾಜ್ಯ