
ಸದಾ ಭಕ್ತರಿಂದ ತುಂಬಿ ತುಳುಕುವ ಕುಕ್ಕೆಯಲ್ಲಿ ಭಕ್ತಾದಿಯೋರ್ವರಿಗೆ ನಾಯಿ ಕಚ್ಚಿದ ಘಟನೆ ವರದಿಯಾಗಿದೆ.
ಗಾಯಾಳುವನ್ನು ಚಿಕಿತ್ಸೆಗಾಗಿ ಸಾಮಾಜಿಕ ಕಾರ್ಯಕರ್ತರು ಕಡಬ ಸಮುದಾಯ ಅಸ್ಪತ್ರೆಗೆ ದಾಖಲಿಸಿರುವುದಾಗಿ ತಿಳಿದು ಬಂದಿದೆ.
ಬೀದಿ ನಾಯಿಗಳ ತೊಂದರೆ ಬಗ್ಗೆ ಹಲವು ಭಾರಿ ಸುಬ್ರಹ್ಮಣ್ಯ ಗ್ರಾ.ಪಂ ಸಭೆಯಲ್ಲಿ ಹಾಗೂ ದೇವಸ್ಥಾನಕ್ಕೆ ಸಂಬಂಧಿಸಿದ ಸಭೆಯಲ್ಲಿ ಚರ್ಚೆಗೆ ಬಂದಿತ್ತಾದರೂ ಇದರ ಬಗ್ಗೆ ಕ್ರಮ ಕೈಗೊಂಡಿಲ್ಲ. ಈ ಬಗ್ಗೆ ಸ್ಥಳೀಯರಿಂದ ಅಕ್ರೋಶ ವ್ಯಕ್ತವಾಗಿದೆ.
ಸುಬ್ರಹ್ಮಣ್ಯ ಸರ್ಕಾರಿ ಆಸ್ಪತ್ರೆಯಲ್ಲೂ 24×7 ಸೇವೆಗಳಿಲ್ಲದೆ ತುರ್ತು ಸಂದರ್ಭದಲ್ಲಿ ದೂರದ ಕಡಬ ಕ್ಕೆ ತೆರಳ ಬೇಕಾಗಿದ್ದು ಭಾರಿ ತೊಂದರೆ ಉಂಟಾಗಿದೆ. ಸುಬ್ರಹ್ಮಣ್ಯ ದೇವಸ್ಥಾನದ ರಥಬೀದಿಯಲ್ಲಿ ಬೀದಿ ನಾಯಿಗಳ ಕಾಟ ಹೆಚ್ಚಾಗಿದ್ದು ಭಕ್ತಾದಿಗಳಿಗೆ, ವಾಹನ ಸವಾರರಿಗೆ ನಿತ್ಯ ತೊಂದರೆ ಉಂಟಾಗುತ್ತಿದೆ.

