ಕೊಲ್ಲಮೊಗ್ರದಲ್ಲಿ ಸಚಿವ ಅಂಗಾರರಿಂದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ.

ಕೊಲ್ಲಮೊಗ್ರದಲ್ಲಿ ಸಚಿವ ಅಂಗಾರರಿಂದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ.

ಸುಳ್ಯ ತಾಲೂಕಿನ ಕಲ್ಮಕಾರು ಹಾಗೂ ಕೊಲ್ಲಮೊಗ್ರ ಗ್ರಾ.ಪಂ. ವ್ಯಾಪ್ತಿಯಲ್ಲಿ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರರವರ ವಿಶೇಷ ಅನುದಾನದಲ್ಲಿ ಮಂಜೂರುಗೊಂಡ ರೂ. 4.70 ಕೋಟಿ ಮೊತ್ತದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಇಂದು ಸಚಿವರು ಗುದ್ದಲಿ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎ.ವಿ.ತೀರ್ಥರಾಮ, ಸುಳ್ಯ ಮಂಡಲ ಬಿಜೆಪಿ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ, ದ.ಕ.ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ವೆಂಕಟ್ ವಳಲಂಬೆ, ಸುಳ್ಯ ಮಂಡಲ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕೇರ್ಪಳ, ಸುಬ್ರಹ್ಮಣ್ಯ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಶಿವಪ್ರಸಾದ್ ನಡ್ತೋಟು, ಗುತ್ತಿಗಾರು ಶಕ್ತಿ ಕೇಂದ್ರದ ಅಧ್ಯಕ್ಷರಾದ ವಿನಯ್ ಮುಳುಗಾಡು, ಸ ಕೊಲ್ಲಮೊಗ್ರ ಗ್ರಾ.ಪಂ.ಅಧ್ಯಕ್ಷರಾದ ಉದಯ್ ಕೊಪ್ಪಡ್ಕ, ಉಪಾಧ್ಯಕ್ಷರಾದ ಜಯಶ್ರೀ ಚಾಂತಾಳ,ಗ್ರಾ.ಪಂ ಸದಸ್ಯರಾದ ಮಾಧವ ಚಾಂತಳ,ಅಶ್ವತ್ ಯಲದಾಳು ಹಾಗೂ ಪಕ್ಷದ ಮುಖಂಡರದ ಉದಯ ಶಿವಾಲ,ರುಕ್ಮಯ್ಯ ದೊಡ್ಡಿಹಿತ್ಲು,ರಾಕೇಶ್ ಮುಳ್ಳುಬಾಗಿಲು ಹಾಗೂ ಬೂತ್ ಸಮಿತಿ ಅಧ್ಯಕ್ಷರು ಮತ್ತು ಕಾರ್ಯದರ್ಶಿ ಹಾಗೂ ಸದಸ್ಯರು ಪಲಾನುಭವಿಗಳು ಮತ್ತು ಊರಿನವರು ಉಪಸ್ಥಿತರಿದ್ದರು.

ರಾಜ್ಯ