
ಸುಳ್ಯ ಮಡಿಕೇರಿ ರಾಜ್ಯ ಹೆದ್ದಾರಿಯ ಪಾಲಡ್ಕ ಎಂಬಲ್ಲಿ ಲಾರಿ, ಕಾರು , ಬೈಕ್ ನಡುವೆ ಸರಣಿ ಅಪಘಾತವಾಗಿ ಬೈಕ್ ಸವಾರರಿಬ್ಬರು, ಹಾಗೂ ಕಾರು ಚಾಲಕ ಗಾಯಗೊಂಡು ಆಸ್ಪತ್ರೆ ಸೇರಿರುವ ಘಟನೆ ಡಿ.15 ರ ಮದ್ಯಾಹ್ನ ವರದಿಯಾಗಿದೆ, ಸುಳ್ಯದಿಂದ ಮಡಿಕೇರಿ ಕಡೆಗೆ ಹೋಗುತ್ತಿದ್ದ ಕಾರು ಮತ್ತು ಮಡಿಕೇರಿಯಿಂದ ಮಂಗಳೂರು ಕಡೆಗೆ ಗ್ಯಾಸ್ ಸಿಲಿಂಡರ್ ಹೇರಿಕೊಂಡು ಹೋಗುತ್ತಿದ್ದ ಲಾರಿ ನಡುವೆ ಅಪಘಾತ ಸಂಭವಿಸಿದೆ, ಈ ಸಂದರ್ಭದಲ್ಲಿ ಕಾರಿನ ಹಿಂದಿನಂದ ಬರುತ್ತಿದ್ದ ಬೈಕ್ ಕಾರಿಗೆ ಡಿಕ್ಕಿಯಾಗಿದೆ, ಘಟನೆಯಲ್ಲಿ ಬೈಕ್ ಸವಾರರು ರಸ್ತೆಗೆ ಎಸೆಯಲ್ಪಟ್ಟು, ಪೆರಾಜೆ ಗ್ರಾಮದ ದೊಡ್ಡಡ್ಕ ದೀನರಾಜ್ ಹಾಗೂ ಕಂಜಿಪಿಲಿ ಪುರುಷೋತ್ತಮ ತೀವ್ರ ಗಾಯಗೊಂಡರೆ, ಕಾರು ..ಲಾರಿಗೆ ಡಿಕ್ಕಿಯಾದ ತೀವ್ರತೆಗೆ ಕಾರು ಚಾಲಕ ಸೊಂಟಕ್ಕೆ ಗಾಯಗೊಂಡು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ, ಬೈಕ್ ಸವಾರರ ಪೈಕಿ ಪುರುಷೋತ್ತಮ ಮೂಗಿನ ಭಾಗಕ್ಕೆ ಗಾಯವಾಗಿದ್ದು, ದೀನ ರಾಜ್ ದೇಹ ಮತ್ತು ತಲೆಗೆ ಗಾಯವಾಗಿದ್ದು ಸುಳ್ಯ ಕೆವಿಜಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಗಾಗಿದ್ದಾರೆ ಎಂದು ತಿಳಿದು ಬಂದಿದೆ, ಬೈಕ್ ನ್ನು ಒವರ್ ಟೇಕ್ ಮಾಡಿ ಕಾರು ಮುನ್ನುಗುತ್ತಿದ್ದ ಸಂದರ್ಭ ಲಾರಿಗೆ ಡಿಕ್ಕಿ ಹೊಡೆದು ಈ ಘಟನೆ ಆಗಲು ಕಾರಣ ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ.

