
ಸುಳ್ಯದ ಶ್ರೀ ಚೆನ್ನಕೇಶವ ದೇವಸ್ಥಾನದ ವಠಾರದಲ್ಲಿ
ಪ್ರಣವ ಸೌಹಾರ್ದ ಸಹಕಾರಿ ಸಂಘ ನಿ ,ಸುಳ್ಯ ರೈತ ಉತ್ಪಾದಕರ ಕಂಪೆನಿ ನಿ, ಮಂಗಳೂರು ವಿಶ್ವವಿದ್ಯಾನಿಲಯ , ಸಾವಯವ ಕೃಷಿಕ ಗ್ರಾಹಕ ಬಳಗ ಮಂಗಳೂರು , ಸಹಕಾರಿ ಯೂನಿಯನ್ ಜಂಟಿ ಆಶ್ರಯದಲ್ಲಿ ತಾಲೂಕು ಆಡಳಿತ, ನಗರ ಪಂಚಾಯತ್ ಮತ್ತು ಕೃಷಿ ಸಂಬಂಧಿತ ಸರಕಾರಿ ಇಲಾಖೆಗಳ ಹಾಗು ಸುದ್ದಿ ಮಾಧ್ಯಮ ಸಂಸ್ಥೆಗಳ ಸಹಕಾರದಿಂದ ಆಯೋಜಿಸಲಾದ ಬೃಹತ್ ಕೃಷಿ ಮೇಳದ ಸಮಾರೋಪ ಸಮಾರಂಭ ಇಂದು ನಡೆಯಿತು.



ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ .ಅವರು ಆಶೀರ್ವಚನ ನೀಡಿ ಕೃಷಿಯಲ್ಲಿ ಸ್ವಾತಂತ್ರ್ಯವಿದೆ, ವಿರಾಮವಿದೆ, ಆರೋಗ್ಯವಿದೆ. ಸನಾತನದೊಂದಿಗೆ ಹೊಸತನವನ್ನು ಆಳವಡಿಸಿ ಹೊಂದಿಸಿಕೊಂಡು ಕೃಷಿ ಮಾಡಿದರೆ ಬದುಕು ಹಸನಾಗುತ್ತದೆ ಎಂದರು.

ಮುಖ್ಯ ಅತಿಥಿಗಳಾಗಿದ್ದ ಒಕ್ಕಲಿಗರ ಸಂಘದ ಉಪಾಧ್ಯಕ್ಷ ಡಾ. ರೇಣುಕಾಪ್ರಸಾದ್ ಮಾತನಾಡಿ ಹಿರಿಯರು ಕಲಿಸಿಕೊಟ್ಟ ಕೃಷಿ ಪರಂಪರೆಯನ್ನು ಮುಂದುವರಿಸಿಕೊಂಡು ಬರುವುದರ ಜೊತೆಗೆ ಕೃಷಿಯಲ್ಲಿ ತಂತ್ರಜ್ಞಾನವನ್ನು ಬಳಸಿ ಸುಲಭವಾಗಿ ಹೆಚ್ಚು ಆದಾಯ ಗಳಿಸಲು ಸಾಧ್ಯ ಎಂದರು.
ಕೆಎಂಎಫ್ ಅಧ್ಯಕ್ಷ ಸುಚರಿತ ಶೆಟ್ಟಿ, ತಹಶೀಲ್ದಾರ್ ಅನಿತಾಲಕ್ಷ್ಮಿ, ಹಿರಿಯ ಸಹಕಾರಿ ನಿತ್ಯಾನಂದ ಮುಂಡೋಡಿ, ತೂಗು ಸೇತುವೆಗಳ ಸರದಾರ ಪದ್ಮಶ್ರೀ ಪುರಸ್ಕೃತ ಗಿರೀಶ್ ಭಾರದ್ವಾಜ್, ನಗರ ಪಂಚಾಯತ್ ಮಾಜಿ ಅಧ್ಯಕ್ಷ ಎನ್.ಎ. ರಾಮಚಂದ್ರ, ಐವರ್ನಾಡು ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಎಸ್. ಎನ್. ಮನ್ಮಥ, ಚೆನ್ನಕೇಶವ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಡಾ.ಹರಪ್ರಸಾದ್ ತುದಿಯಡ್ಕ, ಸುದ್ದಿ ಸಮೂಹ ಸಂಸ್ಥೆಗಳ ಸ್ಥಾಪಕ. ಯು.ಪಿ.ಶಿವಾನಂದ ಅತಿಥಿಗಳಾಗಿ ಭಾಗವಹಿಸಿದ್ದರು.ಪ್ರಣವ ಸಹಕಾರಿ ಸಂಘದ ಅಧ್ಯಕ್ಷ ಜಿ. ಆರ್. ಪ್ರಸಾದ್ ಕಾರ್ಯಕ್ರಮದ
ಅಧ್ಯಕ್ಷತೆ ವಹಿಸಿದ್ದರು.ಕೃಷಿ ಮೇಳದ ವ್ಯವಸ್ಥಾಪನಾ ಸಮಿತಿಯ ಸಂಚಾಲಕರುಗಳಾದ ಎನ್.ಎ.ಜ್ಞಾನೇಶ್, ಹರೀಶ್ ಉಬರಡ್ಕ, ಯಶ್ವಿತ್ ಕಾಳಮನೆ, ರಂಜಿತ್ ಅಡ್ತಲೆ ಸಂತೋಷ್ ಜಾಕೆ ವೇದಿಕೆಯಲ್ಲಿ

ಉಪಸ್ಥಿತರಿದ್ದರು. ಸಂತೋಷ್ ಕುತ್ತಮೊಟ್ಟೆ ಸ್ವಾಗತಿಸಿ,
ದಿನೇಶ್ ಮಡಪ್ಪಾಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಧಾನ ಕಾರ್ಯದರ್ಶಿ ವೀರಪ್ಪ ಗೌಡ ವಂದಿಸಿದರು. ಸೋಮಶೇಖರ ನೇರಳ ಕಾರ್ಯಕ್ರಮ ನಿರೂಪಿಸಿದರು. ಕೃಷಿ ಮೇಳ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಜಿ.ಆರ್.ಪ್ರಸಾದ್ ಹಾಗು ಪ್ರಧಾನ ಕಾರ್ಯದರ್ಶಿ ವೀರಪ್ಪ ಗೌಡ ಕಣ್ಕಲ್ ಅವರನ್ನು ಸನ್ಮಾನಿಸಲಾಯಿತು.
