ನಮ್ಮ ಹಿರಿಯರ ಆಚಾರ ವಿಚಾರ, ಪರಂಪರೆ ಮುಂದಿನ ಪೀಳಿಗೆಗೆ ಹಸ್ತಾಂತರಿಸಬೇಕು:ಡಾ. ರೇಣುಕಾ ಪ್ರಸಾದ್ ಕೆ.ವಿ.

ನಮ್ಮ ಹಿರಿಯರ ಆಚಾರ ವಿಚಾರ, ಪರಂಪರೆ ಮುಂದಿನ ಪೀಳಿಗೆಗೆ ಹಸ್ತಾಂತರಿಸಬೇಕು:ಡಾ. ರೇಣುಕಾ ಪ್ರಸಾದ್ ಕೆ.ವಿ.

ನಮ್ಮ ಹಿರಿಯರ ಆಚಾರ, ವಿಚಾರಗಳು ಮತ್ತು ಪರಂಪರೆಯನ್ನು ಉಳಿಸಿ ಮುಂದಿನ ಪೀಳಿಗೆಗೂ ಹಸ್ತಾಂತರ ಮಾಡಬೇಕಾಗಿದೆ. ಕುಟುಂಬ ಪರಂಪರೆ, ಹಿರಿಯರ ಜೀವನ ಪದ್ದತಿ, ಸಂಸ್ಕೃತಿ, ಸಂಸ್ಕಾರಗಳನ್ನು ತಿಳಿಸುವ ಕೆಲಸ ನಮ್ಮಿಂದಾಗಬೇಕು ಎಂದು ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾದ ಡಾ. ರೇಣುಕಾ ಪ್ರಸಾದ್ ಕೆ.ವಿ ಅಭಿಪ್ರಾಯ ಪಟ್ಟರು. ಅವರು ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘದ ಆಶ್ರಯದಲ್ಲಿ ನಡೆದ ವಾರ್ಷಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತುಪ್ರತಿಭಾ ಪುಸ್ಕಾರ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತಾನಾಡುತ್ತಿದ್ದರು.ನಮ್ಮ ಕುಟುಂಬದ ಮೂಲಸ್ಥಾನದಲ್ಲಿ ನಡೆಯುವ ದೈವ, ದೇವರುಗಳ ಕಾರ್ಯಕ್ಕೆ ನಮ್ಮ ಮನೆಯ ಮಕ್ಕಳು ಭಾಗವಹಿಸುವಂತೆ ಮತ್ತು ಅವರು ಅದರಲ್ಲಿ ಪೂರ್ಣ ಪ್ರಮಾಣದಲ್ಲಿ ತೊಡಗಿಸಿಕೊಳ್ಳುವಂತೆ ನೋಡಿಕೊಳ್ಳಬೇಕಾದ ಮತ್ತು ಮಕ್ಕಳ ಭವಿಷ್ಯವನ್ನು ಅತ್ಯಂತ ಜಾಗರೂಕರಾಗಿ ನಿರ್ವಹಣೆ ಮಾಡಬೇಕಾದ ಅನಿವಾರ್ಯತೆ ನಮ್ಮ ಮೇಲಿದೆ. ನಾವು ಬೆಳೆಯುವುದರೊಂದಿಗೆ ಸಮಾಜವನ್ನು ಸಹಾ ಬೆಳೆಸಿ ನಮ್ಮ ಜನಾಂಗದ ಬಂಧುಗಳನ್ನು ಮುಖ್ಯ ವಾಹಿನಿಗೆ ತರಬೇಕಾದ ಕಾರ್ಯಗಳು ಇನ್ನಷ್ಟು ಆಗಬೇಕಾಗಿದೆ. ಈ ನಿಟ್ಟಿನಲ್ಲಿ ಸಮಾಜದ ಗಣ್ಯ ವ್ಯಕ್ತಿಗಳು ಮತ್ತು ಸಂಘಟನೆಗಳು ಸ್ವಾಸ್ಥ್ಯ ಸಮಾಜವನ್ನು ನಿರ್ಮಾಣ ಮಾಡುವಲ್ಲಿ ಕಾರ್ಯ ಪ್ರವರ್ತರಾಗಬೇಕಾಗಿ ಎಂದು ಅವರಿ ಕರೆ ನೀಡಿದರು.
ಸಮಾರಂಭದ ಅಧ್ಯಕ್ಷತೆಯನ್ನು ಮೋನಪ್ಪ ಗೌಡ ಶಿವಾಜಿನಗರ ವಹಿಸಿದ್ದರು. ವೇದಿಕೆಯಲ್ಲಿ ಲೋಕಯ್ಯ ಗೌಡ ಮಂಗಳೂರು ಮತ್ತು ಮೋಹನ್ ಕಾಯರ್‌ಮಾರ್ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.

ರಾಜ್ಯ