ಸಿರಿಬಾಗಿಲು ಗ್ರಾಮದ ಅರಣ್ಯ ಪ್ರದೇಶದಲ್ಲಿ ಗೊ ಹತ್ಯೆ ಆರೋಪಿ  ಪೊಲೀಸ್ ವಶಕ್ಕೆ:ನ್ಯಾಯಾಂಗ ಬಂಧನ.

ಸಿರಿಬಾಗಿಲು ಗ್ರಾಮದ ಅರಣ್ಯ ಪ್ರದೇಶದಲ್ಲಿ ಗೊ ಹತ್ಯೆ ಆರೋಪಿ ಪೊಲೀಸ್ ವಶಕ್ಕೆ:ನ್ಯಾಯಾಂಗ ಬಂಧನ.

ನೆಲ್ಯಾಡಿ:ದನವೊಂದನ್ನು ಕಡಿದು ಮಾಂಸ ಮಾರಾಟ ಮಾಡಿ ಅದರ ಅವಶೇಷ ಸ್ಥಳದಲ್ಲೇ ಬಿಟ್ಟುಹೋಗಿದ್ದ ವ್ಯಕ್ತಿಯನ್ನು ಉಪ್ಪಿನಂಗಡಿ ಪೊಲೀಸರು ಡಿ.23ರಂದು ಬಂಧಿಸಿದ ಘಟನೆ ವರದಿಯಾಗಿದೆ.
ಕಡಬ ತಾಲೂಕಿನ ಶಿರಾಡಿ ಗ್ರಾಮದ ಅಡ್ಡಹೊಳೆ ಮಿತ್ತಮಜಲು ನಿವಾಸಿ ತೋಮಸ್ ಯಾನೆ ಮನೋಜ್ ಬಂಧನಕ್ಕೊಳಗಾದ ವ್ಯಕ್ತಿ.ಸಿರಿಬಾಗಿಲು ಗ್ರಾಮದ ದೇರಣೆ ಅರಣ್ಯ ಪ್ರದೇಶದಲ್ಲಿ ದನವೊಂದನ್ನು ಕಡಿದು ಮಾಂಸ ಮಾರಾಟ ಮಾಡಿ ಅದರ ತಲೆ, ಕಾಲುಗಳನ್ನು ಅಲ್ಲೇ ಬಿಟ್ಟುಹೋಗಲಾಗಿತ್ತು.ಈ ಪ್ರಕರಣದಲ್ಲಿನ ಇತರೇ ಆರೋಪಿಗಳ ಬಂಧನಕ್ಕೂ ಪೊಲೀಸರು ಬಲೆ ಬೀಸಿದ್ದಾರೆ. ಆರೋಪಿಯನ್ನು ಬಂಧಿಸಿ ಪುತ್ತೂರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.ಕಾರ್ಯಾಚರಣೆಯಲ್ಲಿ ಉಪ್ಪಿನಂಗಡಿ ಸಬ್‌ಇನ್ಸ್‌ಪೆಕ್ಟರ್ ರಾಜೇಶ್, ನೆಲ್ಯಾಡಿ ಹೊರಠಾಣೆ ಹೆಡ್ ಕಾನ್ಸ್‌ಸ್ಟೇಬಲ್‌ಗಳಾದ ಬಾಲಕೃಷ್ಣ, ಕುಶಾಲಪ್ಪ, ಪ್ರತಾಪ್‌ರವರು ಪಾಲ್ಗೊಂಡಿದ್ದರು.

ರಾಜ್ಯ