ಹಿಂದೂ ಭಜಕರ ವಿರುದ್ಧಅವಹೇಳನಕಾರಿ ಬರಹ.       ತಾರಕಕ್ಕೇರಿದ ಹಿಂದೂ ಸಂಘಟನೆಗಳ ಆಕ್ರೋಶ..

ಹಿಂದೂ ಭಜಕರ ವಿರುದ್ಧಅವಹೇಳನಕಾರಿ ಬರಹ. ತಾರಕಕ್ಕೇರಿದ ಹಿಂದೂ ಸಂಘಟನೆಗಳ ಆಕ್ರೋಶ..

ಅರಣ್ಯ ಇಲಾಖೆ ಅಧಿಕಾರಿಯ ಅಮಾನತಿಗೆ ಹಿಂದೂ ಸಂಘಟನೆಗಳ ಪಟ್ಟುಹಿಡಿದಿದ್ದು ನಾಳೆ ತನಕ ಅಧಿಕಾರಿ ಹಾಗು ಜನಪ್ರತಿನಿಧಿಗಳಿಗೆ ಹಿಂದೂ ಸಂಘಟನೆಗಳು ಗಡುವು ನೀಡಿರುವ ವಿದ್ಯಾಮಾನ ನಡೆದಿದೆ.
ಯಾವುದೇ ಕಾನೂನು ಕ್ರಮ ಕೈಗೊಳ್ಳದಿದ್ದಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಐದು ಪೋಲೀಸ್ ಠಾಣೆಯ ಮುಂಭಾಗ ಪ್ರತಿಭಟನೆ ನಡೆಸಲಾಗುವುದು ಎಂದು
ಭಜರಂಗದಳ ದಕ್ಷಿಣ ಪ್ರಾಂತ ಸಹಸಂಯೋಜಕ್ ಮುರಳೀಕೃಷ್ಣ ಹಸಂತಡ್ಕ ಎಚ್ಚರಿಕೆ

ನೀಡಿದ್ದಾರೆ.ಪುತ್ತೂರು ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಅವರು ಹಿಂದೂ ಭಜಕರ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಅರಣ್ಯ ಅಧಿಕಾರಿ ಸಂಜೀವ ಪೂಜಾರಿ ತಕ್ಷಣ ಸೇವೆಯಿಂದ ಅಮಾನತು ಮಾಡಬೇಕು ಮತ್ತು ಬಂಧಿಸಿ ಶಿಕ್ಷೆಗೆ ಒಳಪಡಿಸಬೇಕು ಎಂದಿದ್ದಾರೆ.


ಈ ಹಿಂದೆ ಪ್ರವಾದಿ ಬಗ್ಗೆ ಪೋಸ್ಟ್ ಮಾಡಿದ ಹಿಂದೂ ಯುವಕನನ್ನು ಪೋಲೀಸರು ತಕ್ಷಣ ಬಂಧಿಸಿದ್ದಾರೆ
ಆದರೆ ಹಿಂದೂಗಳ ಆಚರಣೆಯ ಬಗ್ಗೆ ಬರೆದ ಅಧಿಕಾರಿಯ ಮೇಲೆ ಕ್ರಮಕ್ಕೆ ಮೀನಾಮೇಷ ಎಣಿಸಲಾಗುತ್ತಿದೆ ಎಂದು ಪ್ರಶ್ನೆ ಮಾಡಿದ ಅವರು ಕೆಲವೊಂದು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳಿಂದ
ಹಿಂದೂ ಭಜಕರ ಅವಹೇಳನಕಾರಿಯಾಗಿ ಬರೆದ ಅಧಿಕಾರಿಯನ್ನು ಸಮರ್ಥಿಸುವ ಕೆಲಸ ಆಗುತ್ತಿದೆ
ಕಾಂಗ್ರೆಸ್ ಮುಖಂಡ ಬಿ.ಕೆ.ಹರಿಪ್ರಸಾದ್, ಯು.ಟಿ.ಖಾದರ್ ಅಧಿವೇಶನದಲ್ಲಿ ಅಧಿಕಾರಿಯ ಪರ ಮಾತನಾಡುತ್ತಾರೆ ಹಿಂದೂಗಳ ಆಚರಣೆ ಬಗ್ಗೆ ಬರೆದವನ ಪರ ವಹಿಸುವ ಜನಪ್ರತಿನಿಧಿಗಳು ಇದರ ಪರಿಣಾಮ ಎದುರಿಸಲಿದ್ದಾರೆ.ಅಧಿಕಾರಿಯನ್ನು ಅಮಾನತು ಮಾಡದೇ ಹೋದಲ್ಲಿ ಪ್ರತಿಭಟನೆಯನ್ನು ಹಂತ ಹಂತವಾಗಿ ಮಾಡಲಾಗುವುದು 10 ಸಾವಿರ ಭಜಕರನ್ನು ಸೇರಿಸಿ ರಸ್ತೆ ತಡೆ ನಡೆಸಲಾಗುವುದು ಅರಣ್ಯ ಇಲಾಖೆಯ ಎಲ್ಲಾ ಕಛೇರಿ ಮುಂದೆಯೂ ಪ್ರತಿಭಟಿಸಲಾಗುವುದು ಸರಕಾರ ಮತ್ತು ಅಧಿಕಾರಿಗಳಿಗೆ ಈ ಮೂಲಕ ಎಚ್ಚರಿಕೆ ನೀಡುತ್ತಿದ್ದೇನೆ ಮುರಳಿಕೃಷ್ಣ ಹಸಂತಡ್ಕ ಹೇಳಿದರು .ಈ ಸಂದರ್ಭದಲ್ಲಿ ಹಿಂದೂ ಸಂಘಟನೆಯ ವಿವಿಧ ಪದಾಧಿಕಾರಿಗಳಿದ್ದರು.

ರಾಜ್ಯ