
ಅಮೃತಸರ: ಪಂಜಾಬ್ ಗಡಿಯ ಮೂಲಕ ಭಾರತಕ್ಕೆ
ಅತಿಕ್ರಮ ಪ್ರವೇಶ ಮಾಡಲು ಯತ್ನಿಸಿದ ಪಾಕ್
ನಾಗರಿಕನೊಬ್ಬನನ್ನು ಭದ್ರತಾಪಡೆ ಹೊಡೆದುರುಳಿಸಿದೆ.
ಪಂಜಾಬಿನ ಗುರುದಾಸ್ ಪುರ ವಲಯದಲ್ಲಿ ಮುಂಜಾನೆ ಈ ಘಟನೆ ನಡೆದಿದೆ. ಭದ್ರತಾಪಡೆಯ ಎಚ್ಚರಿಕೆ ನಿರ್ಲಕ್ಷಿಸಿ ಭಾರತದ ಕಡೆ ಮುನ್ನುಗ್ಗಿ ಬರುತ್ತಿದ್ದ ವ್ಯಕ್ತಿಯನ್ನು ಹೊಡೆದುರುಳಿಸಲಾಗಿದೆ. ಆರೋಪಿ ಬಳಿ ಇದ್ದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.
ಭದ್ರತಾಪಡೆ ಹಲವು ಬಾರಿ ಎಚ್ಚರಿಕೆ ನೀಡಿದ್ದರೂ ಅದನ್ನು ನಿರ್ಲಕ್ಷಿಸಿದಾಗ ಬಿಎಸ್ಎಫ್ ಯೋಧರು ಗುಂಡು ಹಾರಿಸಿದ್ದಾರೆ ಎಂದು ವರದಿಯಾಗಿದೆ.

