ಪುತ್ತೂರಿನ ಮುಂಡೂರಿನಲ್ಲಿ ಯುವತಿಗೆ ಚೂರಿ ಇರಿದು ಕೊಲೆ.

ಪುತ್ತೂರಿನ ಮುಂಡೂರಿನಲ್ಲಿ ಯುವತಿಗೆ ಚೂರಿ ಇರಿದು ಕೊಲೆ.


ಪುತ್ತೂರು: ವ್ಯಕ್ತಿಯೋರ್ವ ಯುವತಿಯೋರ್ವಳಿಗೆ ಚೂರಿ ಇರಿದ ಘಟನೆ ಮುಂಡೂರಿನಲ್ಲಿ ನಡೆದಿದೆ.
ಮೃತ ಯುವತಿಯನ್ನು ಮುಂಡೂರು ಕಂಪ ನಿವಾಸಿ
ದಿ.ಗುರುವಪ್ಪ ಮತ್ತು ದೇವಕಿ ದಂಪತಿಗಳ ಪುತ್ರಿ ಜಯಶ್ರೀ (23) ಎಂದು ಗುರುತಿಸಲಾಗಿದೆ. ವ್ಯಕ್ತಿಯೋರ್ವ ಯುವತಿಗೆ ಚೂರಿ ಇರಿದಿದ್ದು, ಯುವತಿಯನ್ನು ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಸಾವನ್ನಪ್ಪಿದ್ದಾಳೆ ಎನ್ನಲಾಗಿದೆ.
ಯುವತಿಯ ಮೃತದೇಹವನ್ನು ಪುತ್ತೂರಿನ ಸರಕಾರಿ
ಆಸ್ಪತ್ರೆಯಲ್ಲಿರಿಸಲಾಗಿದ್ದು, ಸಂಪ್ಯ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ..

ರಾಜ್ಯ