
ರಿಕ್ಷಾ ಅಪಘಾತದಲ್ಲಿ ತಲೆಗೆ ಗಂಭೀರ ಗಾಯಗೊಂಡು
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಿಕ್ಷಾ ಚಾಲಕ
ಮಂಡೆಕೋಲಿನ ಕನ್ಯಾನದ ರಾಜೇಶ್ ಎಂಬವರು ಮೃತಪಟ್ಟ ಘಟನೆ ವರದಿಯಾಗಿದೆ.ಜ.21 ರಂದು ಸಂಜೆ ರಾಜೇಶರು ಮನೆ ಸಮೀಪ ರಿಕ್ಷಾ ಚಲಾಯಿಸಿಕೊಂಡು ಹೋಗುತ್ತಿದ್ದಾಗ ಇಳಿಜಾರು ಪ್ರದೇಶದಲ್ಲಿ
ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿಯಾಯಿತು. ಪರಿಣಾಮ
ರಾಜೇಶರ ತಲೆಗೆ ಗಂಭೀರ ಗಾಯವಾಗಿತ್ತು. ಮನೆಯವರು ಅವರನ್ನು ಸುಳ್ಯ ಆಸ್ಪತ್ರೆಗೆ ಕರೆತಂದು ವೈದ್ಯರ ಸಲಹೆ ಮೇರೆಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆ ಫಲಕಾರಿಯಾಗದೆ ಜ.26ರ ತಡರಾತ್ರಿ ರಾಜೇಶರು ಕೊನೆಯುಸಿರೆಳೆದರೆಂದು ತಿಳಿದುಬಂದಿದೆ.ಇವರ ಚಿಕಿತ್ಸೆಗಾಗಿ ಹಲವಾರು ಮಂದಿ ಸಹಾಯವನ್ನೂ ಮಾಡಿದ್ದರು, ಮೃತರು ಪತ್ನಿ,ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

