
ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವರ ಜಾತ್ರೋತ್ಸವದ ಧಾರ್ಮಿಕ ಸಭಾಕಾರ್ಯಕ್ರಮದ ಉದ್ಘಾಟನಾ ಸಮಾರಂಭ ಫೆ.9ರಂದು ನಡೆಯಿತು, ಉದ್ಘಾಟನೆಯನ್ನು ಉದ್ಯಮಿ ಲಕ್ಷ್ಮೀನಾರಾಯಣ ಕಣಿಪ್ಪಿಲ ನೆರವೇರಿಸಿದರು ನಂತರ ಮಾತನಾಡಿದ ಅವರು,ಊರಿನ ಅಭಿವೃದ್ಧಿಯಾಗಬೇಕಾದರೆ ಮೊದಲು ಅಲ್ಲಿರುವ ದೇವಸ್ಥಾನದ ಅಭಿವೃದ್ಧಿಯಾಗಬೇಕು.ಶುದ್ಧ ಮನಸ್ಸು ,ಭಕ್ತಿಯಿಂದ ದೇವರನ್ನು ಪ್ರಾರ್ಥಿಸಬೇಕು . ಮನಸ್ಸಿನ ಅಂತರಂಗದಲ್ಲಿರುವ ಭಕ್ತಿಯಿಂದ ದೇವರನ್ನು ಪ್ರಾರ್ಥಿಸಿ.ಧಾರ್ಮಿಕ ಕಾರ್ಯದಿಂದ ಧರ್ಮ ಜಾಗೃತಿಯಾಗಲು ಸಾಧ್ಯ ಎಂದು ಹೇಳಿದರು.
ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಶ್ರೀನಿವಾಸ ಮಡ್ತಿಲ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಸಹಕರಿಸಿದ ಎಲ್ಲರಿಗೂ ಧನ್ಯವಾದ ಸಲ್ಲಿಸಿದರು.



ಐವರ್ನಾಡು ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಎಸ್.ಎನ್.ಮನ್ಮಥ, ದ.ಕ.ಜೇನು ವ್ಯವಸಾಯಗಾರರ ಸಹಕಾರಿ ಸಂಘದ ಅಧ್ಯಕ್ಷ ಚಂದ್ರಾ ಕೋಲ್ಚಾರ್ ,ಸಹಕಾರ ಭಾರತಿ ಜಿಲ್ಲಾಧ್ಯಕ್ಷ ಕೃಷ್ಣಪ್ರಸಾದ್ ಮಡ್ತಿಲ, ಐವರ್ನಾಡು ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಕೀಲಾಡಿ ವೇದಿಕೆಯಲ್ಲಿ ಉಪಸ್ಥಿತರಿದ್ದು ಮಾತನಾಡಿದರು.ಗ್ರಾಮ ಉಪಾಧ್ಯಕ್ಷೆ ಶ್ರೀಮತಿ ಸುಜಾತ ಪವಿತ್ರಮಜಲು, ಗ್ರಾಮ ಪಂಚಾಯತ್ ಸದಸ್ಯ ದೇವಿಪ್ರಸಾದ್ ಎಸ್.ಎನ್, ಗೆಳೆಯರ ಬಳಗ ದೇರಾಜೆಯ ಕಾರ್ಯದರ್ಶಿ ಅನಿಲ್ ದೇರಾಜೆ ದೇವಸ್ಥಾನದ ವ್ಯವಸ್ಥಾಪನಾ ಸದಸ್ಯರಾದ ಶ್ರೀಮತಿ ಪದ್ಮಾವತಿ ಖಂಡಿಗೆಮೂಲೆ, ಶ್ರೀಮತಿ ತಾರಾ ಆರ್.ರಾವ್ ಉದ್ದಂಪಾಡಿ, ದೇವಿದಾಸ ಕತ್ಲಡ್ಕ,ದಾಸಪ್ಪ ಗೌಡ ಕೋಡ್ತೀಲು,ಕೆ.ವಾಮನ ಗೌಡ ಕೋಂದ್ರಮಜಲು, ದಯಾನಂದ ಚೆಮ್ನೂರು,ಕೆ.ಕರಿಯಪ್ಪ ಕೋಡ್ತೀಲು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ರಾಮಚಂದ್ರ ಗೌಡ ಪಲ್ಲತ್ತಡ್ಕ ಸ್ವಾಗತಿಸಿ,ಮಹಾಬಲೇಶ್ವರ ಬಿರ್ಮುಕಜೆ ಪ್ರಾರ್ಥಿಸಿ,ವ್ಯ.ಸ.ಸದಸ್ಯೆ ಶ್ರೀಮತಿ ತಾರಾ ಆರ್.ರಾವ್ ಉದ್ದಂಪಾಡಿ ವಂದಿಸಿ, ಗಿರೀಶ್ ಕುಂಟಿನಿ ಕಾರ್ಯಕ್ರಮ ನಿರೂಪಿಸಿದರು.