ಸುರತ್ಕಲ್ :ಹತ್ಯೆಯಾದ ಫಾಝಿಲ್ ಸಹೋದರ ಆದಿಲ್ ಎಂಬವರಿಗೆ ಮೂವರು ದುಷ್ಕರ್ಮಿಗಳು ಹಲ್ಲೆ

ಸುರತ್ಕಲ್ :ಹತ್ಯೆಯಾದ ಫಾಝಿಲ್ ಸಹೋದರ ಆದಿಲ್ ಎಂಬವರಿಗೆ ಮೂವರು ದುಷ್ಕರ್ಮಿಗಳು ಹಲ್ಲೆ

ಸುರತ್ಕಲ್: ಕಳೆದ ಕೆಲ ತಿಂಗಳುಗಳ ಹಿಂದೆ ಮಂಗಳೂರು ನಗರದ ಹೊವಲಯದ ಸುರತ್ಕಲ್ ನಲ್ಲಿ ನಡೆದಿದ್ದ ಫಾಝಿಲ್ ಹತ್ಯೆ ಪ್ರಕರಣ, ಬಳಿಕ ನಡೆದ ಜಲೀಲ್ ಹತ್ಯೆ ಪ್ರಕರಣಗಳು ಮಾಸುವ ಮುನ್ನವೇ ಮತ್ತೊಂದು ಕೃತ್ಯ ನಡೆಯುವುದು ಸ್ವಲ್ಪದರಲ್ಲೇ ತಪ್ಪಿದಂತಾಗಿದ್ದು, ಮೃತ ಫಾಝಿಲ್ ಸಹೋದರನ ಮೇಲೆ ದುಷ್ಕರ್ಮಿಗಳ ತಂಡವೊಂದು ಹಲ್ಲೆ ನಡೆಸಿದೆ ಎನ್ನಲಾಗಿದ್ದು,ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

ಇಲ್ಲಿನ ಕಾಟಿಪಳ್ಳ ಸಮೀಪದ ಗಣೇಶ್ ಪುರ ಎಂಬಲ್ಲಿ ಘಟನೆ ನಡೆದಿದ್ದು, ಫಾಝಿಲ್ ಸಹೋದರ ಆದಿಲ್ ಎಂಬವರ ಮೇಲೆ ಮೂವರು ದುಷ್ಕರ್ಮಿಗಳ ತಂಡವೊಂದು ಹಲ್ಲೆ ನಡೆಸಿತ್ತು.ಕೂಡಲೇ ಸ್ಥಳೀಯರು ಸ್ಥಳಕ್ಕೆ ಆಗಮಿಸಿ ದುಷ್ಕರ್ಮಿಗಳಲ್ಲಿ ಇಬ್ಬರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದು, ಓರ್ವ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ. ಈ ಬಗ್ಗೆ ಸುರತ್ಕಲ್ ಠಾಣಾ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ರಾಜ್ಯ