
ಸುಬ್ರಹ್ಮಣ್ಯ, ಫೆ.14: ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದರು.
ಥಾವರ್ ಚಂದ್ ಗೆಹ್ಲೋಟ್ ಪತ್ನಿ ಅನಿತಾ ಗೆಹ್ಲೋಟ್ ಹಾಗೂ ಕುಟುಂಬಸ್ಥರೊಂದಿಗೆ ಫೆ.14ರಂದು ಸಂಜೆ ಸುಮಾರು 6.00ಕ್ಕೆ ಆಗಮಿಸಿ ಶ್ರೀ ದೇವರ ದರುಶನ ಪಡೆದರು.



ಜೊತೆಗೆ ಕುಕ್ಕೆ ಸುಬ್ರಹ್ಮಣ್ಯ ಕಾರ್ಯನಿರ್ವಹಣ ಅಧಿಕಾರಿ ನಿಂಗಯ್ಯ, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿ, ಸದಸ್ಯರು ಉಪಸ್ಥಿತರಿದ್ದರು,
ಪೊಲೀಸ್ ಇಲಾಖೆಯಿಂದ ಎಲ್ಲ ರೀತಿ ಭದ್ರತೆಯನ್ನು ಕೈಗೊಂಡಿದ್ದರು, ಸುಮಾರು 2 ಗಂಟೆಗಳ ಕಾಲ ಸಾರ್ವಜನಿಕ ದರ್ಶನಕ್ಕೆ ಅವಕಾಶ ಇರಲಿಲ್ಲ, ರಾಜ್ಯಪಾಲರು ದರ್ಶನ ಪಡೆದು ಮರಳಿದ ಬಳಿಕ ಎಂದಿನಂತೆ ಸಾರ್ವಜನಿಕ ದರ್ಶನಕ್ಕೆ ಅವಕಾಶ ನೀಡಲಾಯಿತು.
ವರದಿ:ಶಿವ ಭಟ್ ಸುಬ್ರಹ್ಮಣ್ಯ.