
ಫೆ.15 ರಂದು ನಬಾರ್ಡ್ ಪ್ರಾಯೋಜಕತ್ವದಲ್ಲಿ ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಸಹಯೋಗದೊಂದಿಗೆ ಗ್ರಾಮದ ಸ್ವಸಹಾಯ ಸಂಘಗಳು ಸ್ತ್ರೀಶಕ್ತಿ ಗುಂಪುಗಳ ಸದಸ್ಯರುಗಳಿಗೆ ಆರ್ಥಿಕ ಸಾಕ್ಷರತೆ ಮತ್ತು ಡಿಜಿಟಲ್ ಬ್ಯಾಂಕಿಂಗ್ ಬಗ್ಗೆ ಮಾಹಿತಿ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ದೀಪ ಬೆಳಗಿಸುವುದರ ಮೂಲಕ ಸಂಸ್ಥೆಯ ಅಧ್ಯಕ್ಷರಾದ ಶ್ರೀ ನಾಗೇಶ್ ಕುಂದಲ್ಪಾಡಿ ಉದ್ಘಾಟಿಸಿದರು.



ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಶಾಖಾ ವ್ಯವಸ್ಥಾಪಕರಾದ ಭಾಸ್ಕರ್ ರವರು, ಸಹಾಯಕ ಶಾಖಾ ವ್ಯವಸ್ಥಾಪಕರಾದ ಶಶಿಕುಮಾರ್ ಕೆ ಎಸ್ ಹಾಗೂ ಸೇಲ್ಸ್ ಎಕ್ಸಿಕ್ಯೂಟಿವ್ ನಂಜಪ್ಪ ರವರು ಆರ್ಥಿಕ ಸಾಕ್ಷರತೆ ಹಾಗೂ ಡಿಜಿಟಲ್ ಬ್ಯಾಂಕಿಂಗ್ ಬಗ್ಗೆ ಸವಿವರವಾಗಿ ಸದಸ್ಯರೊಂದಿಗೆ ವಿಚಾರವನ್ನು ವಿನಿಮಯ ಮಾಡಿಕೊಂಡರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಉಪಾಧ್ಯಕ್ಷ ಅಶೋಕ ಪಿ ಎಂ, ಕೆಡಿಸಿಸಿ ಬ್ಯಾಂಕಿನ ಸಹಕಾರ ಸಂಘಗಳ ಮೇಲ್ವಿಚಾರಕರಾದ ವಿಜಯ, ಸಂಸ್ಥೆಯ ನಿರ್ದೇಶಕರುಗಳಾದ ಧನಂಜಯ ಕೋಡಿ, ಶೇಷಪ್ಪ ಎನ್ ವಿ, ಪ್ರಮೀಳಾ ಏನ್, ಜಯರಾಮ ಪಿ ಟಿ, ಉಪಸ್ಥಿತರಿದ್ದರು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲೋಕೇಶ್ ರವರು ಕಾರ್ಯಕ್ರಮವನ್ನು ನಿರ್ವಹಿಸಿದರು. ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮದ ಸ್ವಸಹಾಯ ಸಂಘ ಹಾಗೂ ಶ್ರೀ ಶಕ್ತಿ ಗುಂಪುಗಳ ಸದಸ್ಯರು ಭಾಗವಹಿಸಿದ್ದರು.