
ಮಡಿಕೇರಿ ಮಾ.7 : ಗೋಣಿಕೊಪ್ಪ-ಮೈಸೂರು
ಹೆದ್ದಾರಿಯಲ್ಲಿ ಆಟೋ ರಿಕ್ಷಾದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿಯನ್ನು ಗಾಂಜಾ ಮಾರಾಟದ ಕುರಿತು ಖಚಿತ ಮಾಹಿತಿ ದೊರೆತ ಹಿನ್ನೆಲೆ ದಾಳಿ ಮಾಡಿದ ಪೊಲೀಸರು
400 ಗ್ರಾಂ ಗಾಂಜಾ ಸಹಿತ ವಶಕ್ಕೆ ಪಡೆದಿದ್ದಾರೆ. ಗೋಣಿಕೊಪ್ಪಲು ನಿವಾಸಿ ವಿ.ಎಸ್.ಗುರುದತ್ತ (30). ಆರೋಪಿಯೆಂದು ತಿಳಿದುಬಂದಿದೆ ,ಡಿವೈಎಸ್ಪಿ ನಿರಂಜನ್ ರಾಜೇ ಅರಸ್, ಸಿಪಿಐ ವಸಂತ್.ಕೆ.ಎಂ, ಪಿಎಸ್ಐ ಸಿದ್ದರಾಜು ಟಿ.ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದರು. ಇವರ ಕಾರ್ಯಕ್ಷಮತೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ಮಾದಕ ವಸ್ತುಗಳನ್ನು ಬಳಸುವ ಹಾಗೂ ಮಾರಾಟ ಮಾಡುವ ವ್ಯಕ್ತಿಗಳು ಕಂಡುಬಂದಲ್ಲಿ ಸ್ಥಳೀಯ ಪೊಲೀಸ್ ಠಾಣೆ ಅಥವಾ ಕೆ.ಎಸ್.ಪಿ .ತಂತ್ರಾಶದ ಮೂಲಕ ಮಾಹಿತಿ ನೀಡುವಂತೆ ಎಸ್ಪಿ ಮನವಿ ಮಾಡಿದ್ದಾರೆ. ಅಕ್ರಮ ಚಟುವಟಿಕೆಗಗಳ ಕುರಿತು
ಮಾಹಿತಿ ವಿವರಗಳನ್ನು ಒದಗಿಸುವವರ
ಬಹಿರಂಗಪಡಿಸುವುದಿಲ್ಲವೆಂದು ಹೇಳಿದ್ದಾರೆ.

