ಎಡಮಂಗಲ ಎಡವಿಬಿದ್ದ ಮಹಿಳೆ :ಕೈಯಲ್ಲಿ ಹಿಡಿದಿದ್ದ ಟ್ಯಾಪಿಂಗ್ ಕತ್ತಿ ಎದೆಗೆ ತಾಗಿ ದಾರುಣ ಸಾವು.

ಎಡಮಂಗಲ ಗ್ರಾಮದ ಬಳಕ್ಕಬೆ ನಿವಾಸಿ ಶಿವರಾಮ
ಎಂಬವರ ಪತ್ನಿ ಶ್ರೀಮತಿ ಗೀತಾ ಎಂಬವರು ಟ್ಯಾಪಿಂಗ್ ಕತ್ತಿ ಆಕಸ್ಮಿಕವಾಗಿ ಎದೆಗೆ ಹೊಕ್ಕು ಮೃತಪಟ್ಟ ಘಟನೆ ಇಂದು ಮುಂಜಾನೆ ನಡೆದಿದೆ.
ಗೀತಾರವರು ತಮ್ಮದೇ ರಬ್ಬರ್ ತೋಟದಲ್ಲಿ ಟ್ಯಾಪಿಂಗ್ ಕೆಲಸ ಮುಗಿಸಿ ಸುಮಾರು 7 ಗಂಟೆ ಹೊತ್ತಿಗೆ ಮನೆಗೆ ಹಿಂತಿರುಗುವಾಗ ಎಡವಿ ಬಿದ್ದರೆನ್ನಲಾಗಿದೆ. ಬೀಳುವಾಗ ಹರಿತವಾದ ಕತ್ತಿ ಎದೆಯೊಳಗೆ ಹೊಕ್ಕು ಮೃತಪಟ್ಟಿರುವುದಾಗಿ ಮೃತರ ಪತಿ ಪೊಲೀಸ್ ದೂರು ನೀಡಿದ್ದು, ಬೆಳ್ಳಾರೆ ಪೊಲೀಸರು ಪ್ರಕರಣ
ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ರಾಜ್ಯ