ಮಂಗಳೂರು: ಟಿಪ್ಪರೊಂದು ಸ್ಕೂಟರ್ಗೆ ಢಿಕ್ಕಿ ಹೊಡೆದ ಪರಿಣಾಮವಾಗಿ ಅಪಘಾತದಲ್ಲಿ ಇಬ್ಬರು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ನಂತೂರು ಸರ್ಕಲ್ನಲ್ಲಿ ನಡೆದಿದೆ.
ಈ ಅಪಘಾತದಿಂದಾಗಿ ಸ್ಕೂಟರ್ ಟಿಪ್ಪರ್ನ ಅಡಿಗೆ ಸಿಲುಕಿ ತಂದೆ ಮತ್ತು ಅವರ ಮಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ. ಮೃತಪಟ್ಟವರ ವಿವರ ಲಭ್ಯವಾಗಿಲ್ಲ.
ಸಿಗ್ನಲ್ ಬಳಿ ನಿಂತಿದ್ದ ಸ್ಕೂಟರ್ಗೆ ಟಿಪ್ಪರ್ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಈ ಘಟನೆ ನಡೆದ ಬೆನ್ನಲ್ಲೇ ಸ್ಥಳದಲ್ಲಿದ್ದ ಸ್ಥಳೀಯರು ಟಿಪ್ಪರ್ ಚಾಲಕನಿಗೆ ಹಲ್ಲೆ ನಡೆಸಿದ್ದಾರೆಂದು ತಿಳಿದು ಬಂದಿದೆ. ಟಿಪ್ಪರ್ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

