ಲಿಂಗಾಯತರಿಗೆ 7%, ಒಕ್ಕಲಿಗ ಮತ್ತಿತರ ಜಾತಿಗಳಿಗೆ 6% ಮೀಸಲಾತಿ ಘೋಷಣೆ.

ಲಿಂಗಾಯತರಿಗೆ 7%, ಒಕ್ಕಲಿಗ ಮತ್ತಿತರ ಜಾತಿಗಳಿಗೆ 6% ಮೀಸಲಾತಿ ಘೋಷಣೆ.


ಇತ್ತೀಚೆಗೆ ಮೀಸಲಾತಿ ಹೆಚ್ಚಳಕ್ಕೆ ಒತ್ತಾಯಿಸಿ ಬೀದಿಗಿಳಿದು ಹೋರಾಟ ನಡೆಸುತ್ತಿದ್ದ ಲಿಂಗಾಯತ ಪಂಚಮಸಾಲಿ ಮತ್ತು ಒಕ್ಕಲಿಗರಿಗೆ ಸಿಎಂ ಬಸವರಾಜ್​ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ ಗುಡ್​ನ್ಯೂಸ್​ ಕೊಟ್ಟಿದೆ.
ಇಂದು ವಿಧಾನಸೌಧದಲ್ಲಿ ನಡೆದ ಸರ್ಕಾರದ ಕೊನೇ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಬಗ್ಗೆ ಖುದ್ದು ಸಿಎಂ ಬಸವರಾಜ್​ ಬೊಮ್ಮಾಯಿ ಅವರೇ ಪತ್ರಿಕಾಗೋಷ್ಠಿ ನಡೆಸಿ ಘೋಷಣೆ ಮಾಡಿದ್ದಾರೆ. ಮಹತ್ತರ ರಾಜಕೀಯ ಬೆಳವಣಿಗೆಯೊಂದರಲ್ಲಿ 3B ಕ್ಯಾಟಗರಿಯಲ್ಲಿದ್ದ ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2D ಅಡಿಯಲ್ಲಿ ಶೇ.7 ರಷ್ಟು ಮೀಸಲಾತಿ ನೀಡುವ ತೀರ್ಮಾನಕ್ಕೆ ಬಂದಿದೆ. ಅಲ್ಲದೇ 3A ಕ್ಯಾಟಗರಿಯಲ್ಲಿದ್ದ ಒಕ್ಕಲಿಗ ಮತ್ತಿತರ ಸಮುದಾಯಗಳಿಗೆ 2C ಅಡಿಯಲ್ಲಿ ಶೇ.6 ರಷ್ಟು ಮೀಸಲಾತಿ ನೀಡುವ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ.

Uncategorized