
ಮಾ. 30 ರಂದು ರೋಟರಿ ಕ್ಲಬ್ ಸುಳ್ಯ ಸಿಟಿಗೆ ರೋಟರಿ ಕ್ಲಬ್ ಜಿಲ್ಲಾ ಗವರ್ನರ್ ಪ್ರಕಾಶ್ ಕಾರಂತ್ ಅವರ ಅಧಿಕೃತ ಭೇಟಿನೀಡಲಿದ್ದಾರೆ ಎಂದು ರೋಟರಿ ಕ್ಲಬ್ ಸುಳ್ಯ ಸಿಟಿ ಅಧ್ಯಕ್ಷ ಪಿ.ಮುರಳೀಧರ ರೈ ತಿಳಿಸಿದ್ದಾರೆ. ಸುಳ್ಯ ಪ್ರೆಸ್ ಕ್ಲಬ್ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರೋಟರಿ ಜಿಲ್ಲಾ ಗವರ್ನರ್ ಭೇಟಿ ಅಂಗವಾಗಿ ರೋಟರಿ ಸಮುದಾಯ ಭವನದಲ್ಲಿ ಸಂಜೆ 6.30ರಿಂದ ಚಾರ್ಟರ್ ನೈಟ್ ಹಾಗು ರೋಟರಿ ಸುಳ್ಯ ಸಿಟಿ ಜೀವಮಾನ ಸಾಧಕ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ರೋಟರಿ ಅಸಿಸ್ಟೆಂಟ್ ಗವರ್ನರ್ ಶಿವರಾಮ ಏನೆಕಲ್ಲು, ಝೋನಲ್ ಲೆಪ್ಟಿನೆಂಟ್ ಪ್ರೀತಮ್ ಡಿ.ಕೆ, ಜಿಎಸ್ಆರ್ ಡಾ.ಕೇಶವ ಪಿ.ಕೆ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.ಇದೇ ದಿವಸ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಲಿದ್ದು, ಈಗಾಗಲೆ ಖ್ಯಾತ ವೈದ್ಯರಾದ ಡಾ.ರಘುರಾಮ ಮಾಣಿಬೆಟ್ಟುರವರನ್ನು ರೋಟರಿ ಸಿಟಿ ‘ಜೀವಮಾನ ಸಾಧಕ ಪ್ರಶಸ್ತಿ’ಗೆ ಆಯ್ಕೆ ಮಾಡಲಾಗಿದ್ದು ಅಂದು ಅವರಿಗೆ ಪ್ರಧಾನ ಮಾಡಲಾಗುವುದು.ಮುಂದೆ ಪ್ರತೀ ವರ್ಷ ರೋಟರಿ ಕ್ಲಬ್ ಸುಳ್ಯ ಸಿಟಿ ವತಿಯಿಂದ ಸಾದಕರನ್ನು ಗುರುತಿಸಿ ಸಾಧಕ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಹೇಳಿದರು
ರೋಟರಿ ಕ್ಲಬ್ ಸೇವೆ ಹಾಗು ಚಟುವಟಿಕೆ ಶ್ರೀಮಂತರಿಗೆ ಮಾತ್ರ ಎನ್ನುವ ಮಾತುಗಳು ಕೇಳಿಬರುತ್ತಿತ್ತು ಆದರೆ ಹಾಗಿಲ್ಲ ನಗರದಿಂದ ಗ್ರಾಮೀಣ ಭಾಗಕ್ಕೆ ಸೇವೆ ವಿಸ್ತರಿಸಿದ್ದೇವೆ, ಈಗಾಗಲೇ ರೋಟರಿ ಕ್ಲಬ್ ಸುಳ್ಯ ಸಿಟಿಯು ಗ್ರಾಮೀಣ ಭಾಗವಾದ ಮರ್ಕಂಜ, ಆಲೆಟ್ಟಿ, ಪೆರ್ಲಂಪಾಡಿ ಸೇರಿ ವಿವಿಧ ಕಡೆಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕ, ಆರೋಗ್ಯ ಶಿಬಿರ, ರಕ್ತದಾನ ಶಿಬಿರ, ಇ-ಲರ್ನಿಂಗ್ ಮೊದಲಾದ ಕಾರ್ಯಕ್ರಮ ನಡೆಸಿದ್ದೇವೆ ಎಂದು ಅವರು ಹೇಳಿದರು ಸುದ್ದಿಗೋಷ್ಠಿಯಲ್ಲಿ ರೋಟರಿ ಕ್ಲಬ್ ಸುಳ್ಯ ಸಿಟಿ ಕಾರ್ಯದರ್ಶಿ ಶಿವಪ್ರಸಾದ್ ಕೆ.ವಿ, ಅವಾರ್ಡ್ ಕಮಿಟಿ ಚೆಯರ್ಮೆನ್ ಶ್ಯಾಮ್ ಭಟ್ ಉಪಸ್ಥಿತರಿದ್ದರು.


