ಏ.16ರಿಂದ ಮೇ 14ರ ತನಕ ಸಾರ್ಥಕ ಇಪ್ಪತ್ತಮೂರನೇ ವರ್ಷದ ಸಂಭ್ರಮದಲ್ಲಿ:ಶ್ರೀ ಕೇಶವಕೃಪಾ ಅಂತರ್‌ರಾಜ್ಯ ಮಟ್ಟದ ವೇದ-ಯೋಗ-ಕಲಾ ಶಿಬಿರ.

ಏ.16ರಿಂದ ಮೇ 14ರ ತನಕ ಸಾರ್ಥಕ ಇಪ್ಪತ್ತಮೂರನೇ ವರ್ಷದ ಸಂಭ್ರಮದಲ್ಲಿ:ಶ್ರೀ ಕೇಶವಕೃಪಾ ಅಂತರ್‌ರಾಜ್ಯ ಮಟ್ಟದ ವೇದ-ಯೋಗ-ಕಲಾ ಶಿಬಿರ.

ಶ್ರೀ ಕೇಶವಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ಆಶ್ರಯದಲ್ಲಿ ನಡೆಯುವ ಶ್ರೀ ಕೇಶವಕೃಪಾ ವೇದ ಯೋಗ ಕಲಾ ಶಿಬಿರವು ತನ್ನದೇ ಆದ ವಿಶಿಷ್ಟಕಾರ್ಯಕ್ರಮಗಳಿಂದ ರಾಜ್ಯ ಹಾಗೂ ಅಂತರ್‌ರಾಜ್ಯಗಳಲ್ಲಿ ಜನಮೆಚ್ಚುಗೆ ಗಳಿಸಿದ ವೇದ-ಯೋಗ-ಕಲಾ ಶಿಬಿರವಾಗಿ ಇದೀಗ ಇಪ್ಪತ್ತಮೂರನೇ ವರ್ಷದ ಸಂಭ್ರಮದಲ್ಲಿದ್ದುಎ. 16 ರಿಂದ ಮೇ 14 ರ ವರೆಗೆ ಸುಳ್ಯದ ಹಳೆಗೇಟು ವಿದ್ಯಾನಗರದ ಕೇಶವಕೃಪಾದಲ್ಲಿ ನಡೆಯಲಿದೆ ಎಂದು ಕೇಶವ ಕೃಪಾ ವೇದ ಶಿಬಿರದ ಸಂಚಾಲಕ ಅಭಿರಾಮ್ ಶರ್ಮ ತಿಳಿಸಿದ್ದಾರೆ .ಅವರು ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೊಸ್ಟಿ ನಡೆಸಿ ಮಾತನಾಡಿ ಬೇಸಿಗೆಯಲ್ಲಿ ಸಣ್ಣ ಮಕ್ಕಳ ದೊಡ್ಡ ರಜೆ ಆರಂಭವಾದೊಡನೆ ಹಲವಾರು ಶಿಬಿರಗಳು ಆರಂಭಗೊಳ್ಳುತ್ತದೆ. ನಾಟಕ ಶಿಬಿರ, ರಂಗ ತರಬೇತಿ ಶಿಬಿರ, ಚಿಣ್ಣರ ಶಿಬಿರ, ನಾಯಕತ್ವ ಶಿಬಿರ ಸೇರಿದಂತೆ ಇನ್ನಿತರ ಶಿಬಿರಗಳು ಅಲ್ಲಲ್ಲಿ ನಡೆದರೂ ಭಾರತದ ಸಾಂಸ್ಕೃತಿಕ ಮೌಲ್ಯಗಳಿಗೆ ಪ್ರಧಾನ ಭೂಮಿಕೆಗಳಾದ ವೇದ ಶಿಬಿರಗಳು ಮಾತ್ರ ಎಲ್ಲೋ ಕೆಲವು ಕಡೆ ಮಾತ್ರ ನಡೆಯುತ್ತದೆಯಷ್ಟೆ.


ಅಂತಹ ವೇದ ಶಿಬಿರಗಳಲ್ಲಿ ಒಂದಾದ ಸುಳ್ಯದ ಶ್ರೀ ಕೇಶವಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ
ಆಶ್ರಯದಲ್ಲಿ ನಡೆಯುವ ಶ್ರೀ ಕೇಶವಕೃಪಾ ವೇದ-ಯೋಗ-ಕಲಾ ಶಿಬಿರವು ಕಳೆದ 22 ವರ್ಷಗಳಿಂದ
ಸಂಪೂರ್ಣ ಉಚಿತವಾಗಿ ವೇದ-ಯೋಗ ಹಾಗೂ ಕಲಾ ಶಿಕ್ಷಣದೊಂದಿಗೆ ಅಶನ, ವಸನ, ವಸತಿ, ಪಠ್ಯ
ಪುಸ್ತಕಗಳೂ, ವ್ಯಾಸಪೀಠ ಇತ್ಯಾದಿಗಳನ್ನು ನೀಡಿ ಸಂಪೂರ್ಣ ಉಚಿತವಾಗಿ ನಡೆಸಿಕೊಂಡು ಬರುತ್ತಿದೆ.
ವಿಶಿಷ್ಟವಾದ ವೇದ ಯೋಗ ಕಲಾ ಶಿಬಿರ
ಇಲ್ಲಿನ ವೇದ ಶಿಬಿರದ ವಿಶೇಷತೆಯೇನೆಂದರೆ ಇಲ್ಲ ಬರೇ ವೇದ ಪಾಠ ಮಾತ್ರವಲ್ಲದೆ ವೇದಾಂತರ್ಗತವಾದ ಜೀವನ ದರ್ಶನವನ್ನು ಜನಮಾನಸಕ್ಕೆ ಸಮರ್ಥವಾಗಿತಲುಪಿಸಲು ಮಾಧ್ಯಮವಾದ ಯೋಗಾಭ್ಯಾಸ, ಭಜನೆ, ಸಂಕೀರ್ತನೆಗಳು , ಹಾಡು-ಕುಣಿತ ಮುಂತಾದವುಗಳೂ ಅಲ್ಲದೆ ಇಂದಿನ ಮಕ್ಕಳಲ್ಲಿ‌ ರಾಷ್ಟ್ರಪ್ರೇಮದ ಭಕ್ತಿ ತರಂಗವನ್ನು ಮೂಡಿಸುವ ಹಲವಾರು ವೈವಿಧ್ಯ ಕಾರ್ಯಕ್ರಮಗಳೊಂದಿಗೆ ಮಕ್ಕಳ ಮನೋವಿಕಾಸಕ್ಕೆ ಪೂರಕವಾಗಿ ಜಾದೂ, ಮಿಮಿಕ್ರಿ, ಮುಖವಾಡ ತಯಾರಿ, ಬೊಂಬೆ ತಯಾರಿ ಮಾತುಗಾರಿಕೆ, ಜಾನಪದ ನೃತ್ಯಗಳು, ಹಾವುಗಳ ಮಾಹಿತಿ, ಯಕ್ಷಗಾನ ರಂಗಕಲೆ, ರಂಗಪಾಠಗಳು,ರಂಗಗೀತೆ, ಚಿತ್ರಕಲೆ ಹೀಗೆ ಹಲವಾರು ವಿಷಯಗಳಲ್ಲಿ ರಾಜ್ಯದ ಸುಪ್ರಸಿದ್ಧ ಸಂಪನ್ಮೂಲ ವ್ಯಕ್ತಿಗಳಿಂದ ಶಿಕ್ಷಣ ನೀಡಲಾಗುತ್ತದೆ.

ಅಲ್ಲದೇ ಈ ವರ್ಷ ಮತ್ತೂ ಒಂದು ಹೆಜ್ಜೆ ಮುಂದಡಿಯಿಟ್ಟು ಇದೇ ಶಿಬಿರದಲ್ಲಿ
ಮೂರು ವರ್ಷಗಳನ್ನು ಪೂರೈಸಿದ ವಿದ್ಯಾರ್ಥಿಗಳಿಗೆ ಅಗ್ನಿಮುಖ ಪ್ರಯೋಗ ಹಾಗೂ ದುರ್ಗಾಸಪ್ತಶತಿ
ಪಾಠಗಳನ್ನು ಅಳವಡಿಸಿಕೊಳ್ಳಲಾಗುತ್ತದೆ. ಋಗ್ವದ ಹಾಗೂ ಯಜುರ್ವೇದ ವಿಭಾಗಗಳಲ್ಲಿ ಒಟ್ಟು 6
ತರಗತಿಗಳು ನಡೆಯಲಿದ್ದು, ರಾಜ್ಯದ ಪ್ರಸಿದ್ಧ ವೇದ ವಿದ್ವಾಂಸರು, ಕಲಾ ತಜ್ಞರು, ಯೋಗ ಶಿಕ್ಷಕರು,
ಅಧ್ಯಾಪಕರಾಗಿ ಭಾಗವಹಿಸಲಿದ್ದಾರೆ. ಈ ಎಲ್ಲಾ ಕಾರಣಗಳಿಂದ ಶ್ರೀ ಕೇಶವಕೃಪಾ ವೇದ ಶಿಬಿರಕ್ಕೆ
ವರ್ಷದಿಂದ ವರ್ಷಕ್ಕೆ ದಾಖಲೆ ಸಂಖ್ಯೆಯಲ್ಲಿ 150ಕ್ಕೂ ಮಿಕ್ಕಿ ವಿದ್ಯಾರ್ಥಿಗಳು ಅವಕಾಶಕ್ಕಾಗಿ ಹೆಸರು
ನೋಂದಾಯಿಸುತ್ತಿದ್ದು, ಇವರೆಲ್ಲರಿಗೂ ಪ್ರವೇಶ ಪರೀಕ್ಷೆ(Interview) ನ್ನು ಏಪ್ರಿಲ್ 1 ಹಾಗೂ 2ರಂದು ಎಂಟ್ರೆಂಗ್ ಎಕ್ಸಾಮ್ ಸುಳ್ಯ ಶಿವಕೃಪಾ ಕಲಾ ಮಂದಿರದಲ್ಲಿ ನಡೆಯಲಿದೆ.
ಪ್ರತೀ ವರ್ಷವೂ 50ರಿಂದ 60 ವಿದ್ಯಾರ್ಥಿಗಳಷ್ಟು ಅವಕಾಶವಿರುವ ಈ ಶಿಬಿರದಲ್ಲಿ ಈ ವರ್ಷ
150ಕ್ಕೂ ಮಿಕ್ಕಿ ಅಭ್ಯರ್ಥಿಗಳು ಹೆಸರು ನೋಂದಾಯಿಸಿದ್ದು, ಇಂಟರ್‌ವ್ಯೂ ಮೂಲಕ 60 ಹೊಸ ವಿದ್ಯಾರ್ಥಿಗಳನ್ನು ರಾಜ್ಯವಾರು ವಿಭಾಗದಿಂದ ಆಯ್ಕೆ ಮಾಡಲಾಗುತ್ತಿದ್ದು, ಹಿಂದಿನ ವರ್ಷದ 100 ಜನ
ವಿದ್ಯಾರ್ಥಿಗಳೂ ಸೇರಿದಂತೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಉಚಿತವಾಗಿ ಶಿಕ್ಷಣದೊಂದಿಗೆ ಊಟ, ವಸತಿ,ಪುಸ್ತಕ, ವ್ಯಾಸಪೀಠ, ವಸ್ತ್ರ-ಉತ್ತರೀಯಗಳನ್ನು ನೀಡಲಾಗುತ್ತದೆ ಎಂದು ಹೇಳಿದರು.

ಉದ್ಘಾಟನಾ ಸಂಭ್ರಮ

ಕೇಶವಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ಅಧ್ಯಕ್ಷ ಪುರೋಹಿತ ನಾಗರಾಜ್ ಭಟ್ ಮಾತನಾಡಿ
ಎ.16 ನೇ ಭಾನುವಾರವಾರ ಬೆಳಗ್ಗೆ 10.30ಕ್ಕೆ ಶಿಬಿರದ ಕೇಶವ ಕಿರಣ ಸಭಾಂಗಣದಲ್ಲಿ ಇದರ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು,ಉದ್ಘಾಟನೆಯನ್ನು ಹಿರಿಯ ವಿದ್ಯಾರ್ಥಿ, ಬೆಂಗಳೂರಿನ Commscope R&D ಕಂಪೆನಿಯ ಇಂಜಿನಿಯರಾದ ಶ್ರೀ ಶ್ರೀನಿಧಿ ಉಪಾಧ್ಯಾಯ ಅಡಿಕೆಹಿತ್ಲು ಹಾಗೂ ಭರತನಾಟ್ಯ ಹಾಗೂ ಸಂಗೀತ ಶಿಕ್ಷಕಿಯಾದ ಶ್ರೀಮತಿ ವಿದುಷಿ ಪ್ರಾಂಜಲಿ ಉಪಾಧ್ಯಾಯ ದಂಪತಿಗಳು ನೆರವೇರಿಸಲಿದ್ದಾರೆ , ವೇದ ಶಿಬಿರದ ಅಧ್ಯಾಪಕ, ಜ್ಯೋತಿಷಿ ವೇ ಮೂ ಸುದರ್ಶನ ಭಟ್ಟ, ಉಜಿರೆ ಇವರು ಸಭಾಧ್ಯಕ್ಷತೆಯನ್ನು ವಹಿಸಲಿದ್ದಾರೆ. ಸರಕಾರಿ ಸಂಸ್ಕೃತ ಕಾಲೇಜು, ಮೇಲುಕೋಟೆ ಇದರ ನಿವೃತ್ತ ಪ್ರಾಂಶುಪಾಲರಾದ ವಿದ್ಯಾವಾಚಸ್ಪತಿ ಉಮಾಕಾಂತ ಭಟ್ಟ ಕೆರೆಕೈ ಇವರು ದಿಕ್ಸೂಚಿ ಉಪನ್ಯಾಸ ಮಾಡಲಿದ್ದು, ಗೀತಾ ಸಾಹಿತ್ಯ ಸಂಭ್ರಮದ ನಿರ್ದೇಶಕ ಹಾಗೂ ಅಧ್ಯಾಪಕರಾದ ಶ್ರೀ ವಿಠಲ ನಾಯಕ್ ಇವರು ಮುಖ್ಯ ಅಭ್ಯಾಗತರಾಗಿ ಭಾಗವಹಿಸಲಿದ್ದಾರೆ. ಶ್ರೀ ಕೇಶವಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ಗೌರವಾಧ್ಯಕ್ಷರಾದ ಶ್ರೀ ಗೋಪಾಲಕೃಷ್ಣ ಭಟ್ ವಗೆನಾಡು ಉಪಸ್ಥಿತರಿದ್ದು ಶುಭಾಶಂಸನೆಯನ್ನು ಮಾಡಲಿದ್ದಾರೆ. ಎಂದು ಹೇಳಿದರು‌.
ಪತ್ರಿಕಾಗೋಷ್ಠಿಯಲ್ಲಿ ಪ್ರತಿಷ್ಠಾನದ ಅಧ್ಯಕ್ಷ ಪುರೋಹಿತ ನಾಗರಾಜ ಭಟ್, ಸದಸ್ಯರಾದ ಶ್ರೀಮತಿ ಸುಜಾತಾ
ರಾಧಾಕೃಷ್ಣ ಭಟ್, ಸರಣಿಶಿವಪೂಜಾ ಅಭಿಯಾನದ ಸಂಚಾಲಕರಾದ ಶ್ರೀ ಗೋಪಾಲಕೃಷ್ಣ ಭಟ್
‘ಶಿವನಿವಾಸ’, ಶಿಬಿರ ಸಂಚಾಲಕ ವೇ ಮೂl ಅಭಿರಾಮ ಶರ್ಮಾ ಉಪಸ್ಥಿತರಿದ್ದರು.

ರಾಜ್ಯ