ಸಂಪಾಜೆ: ಅಕ್ರಮ ಮರ ಸಾಗಾಟ| ಲಾರಿ ಮತ್ತು ಮರದ ದಿಮ್ಮಿ ಸಹಿತ ಆರೋಪಿ ಬಂಧನ:
ಕೊಡಗು ಜಿಲ್ಲಾ ಸಂಪಾಜೆ ವಲಯಾರಣ್ಯ ವ್ಯಾಪ್ತಿಯ ಅರಣ್ಯ ತನಿಖಾ ಠಾಣೆ ಸಂಪಾಜೆಯಲ್ಲಿ ಮಡಿಕೇರಿಯಿಂದ ಮಂಗಳೂರು ಕಡೆಗೆ ಲಾರಿಯಲ್ಲಿ ಅಕ್ರಮವಾಗಿ ಹೆಬ್ಬಲಸು ಮರದ ತುಂಡುಗಳನ್ನು ಸಾಗಿಸುತ್ತಿದ್ದ ಆರೋಪದಲ್ಲಿ ವ್ಯಕ್ತಿಯೋರ್ವನನ್ನು ಬಂಧಿಸಲಾಗಿದೆ. ಆರೋಪಿಯನ್ನು ಮಂಗಳೂರು ಅಸೈಗೋಳಿಯ ಮಹಮ್ಮದ್ ಸಪ್ವಾನ್ ಎಂದು ಗುರುತಿಸಲಾಗಿದೆ. ಆರೋಪಿ ಹಾಗೂ ಮರ ಸಾಗಾಟಕ್ಕೆ ಬಳಸಿದ್ದ ವಾಹನವನ್ನು ಸಂಪಾಜೆ…









