ನಿಂತಿಕಲ್ಲಿನಲ್ಲಿ ಎ.09ರಂದು ಸುಳ್ಯ ವಿಧಾನ ಸಭಾ ಕ್ಷೇತ್ರದ ನಂದಕುಮಾರ್ ಅಭಿಮಾನಿ ಕಾಂಗ್ರೆಸ್ ಕಾರ್ಯಕರ್ತರ ಬ್ರಹತ್ ಸಮಾವೇಶ.

ಸುಳ್ಯ ವಿಧಾನ ಸಭಾ ಕ್ಷೇತ್ರದ ನಂದಕುಮಾರ್ ಅಭಿಮಾನಿ ಕಾಂಗ್ರೆಸ್ ಕಾರ್ಯಕರ್ತರ ಬ್ರಹತ್ ಸಮಾವೇಶವನ್ನು ನಿಂತಿಕಲ್ಲಿನ ಧರ್ಮಶ್ರೀ ಆರ್ಕೆಡ್ ನಲ್ಲಿ ಎ.09ರಂದು ಆಯೋಜಿಸಲು ಇಂದು ಕಡಬದಲ್ಲಿ ನಡೆದ ಅಭಿಮಾನಿ ಬಳಗದ ಪ್ರಮುಖರ ಸಭೆಯಲ್ಲಿ ತೀರ್ಮಾನಿಸಲಾಗಿದೆ. ನಂದಕುಮಾರ್ ರವರಿಗೆ ಟಿಕೆಟ್ ಮತ್ತು ಬಿ ಫಾರಂ ನೀಡಬೇಕು. ಸುಳ್ಯದಲ್ಲಿ ಕಾಂಗ್ರೆಸ್ ವಿಜಯ ಗಳಿಸಬೇಕು. ಮತ್ತು ಪ್ರಾಮಾಣಿಕ ಕಾರ್ಯಕರ್ತರಿಗೆ ಕಾಂಗ್ರೆಸ್ ಗೆಲುವಿನ ಮೂಲಕ ನ್ಯಾಯ ದೊರಕಿಸಬೇಕು ಎಂಬ ಆಶಯದೊಂದಿಗೆ ಒಂದು ವೇಳೆ ನಂದಕುಮಾರ್ ರವರಿಗೆ ಬಿ ಫಾರಂ ಕೈ ತಪ್ಪಿದ್ದಲ್ಲಿ ಕಾರ್ಯಕರ್ತರ ಮುಂದಿನ ನಡೆಯ ಕುರಿತು ತೀರ್ಮಾನ ಕೈಗೊಳ್ಳಲು ಅಭಿಮಾನಿ ಕಾರ್ಯಕರ್ತರ ಬ್ರಹತ್ ಸಮಾವೇಶ ನಡೆಸಲು ತೀರ್ಮಾನಿಸಲಾಗಿದೆ ಎಂದು ತಿಳಿದು ಬಂದಿದೆ.

ರಾಜ್ಯ