
ಮಂಗಳೂರು: ನಗರದ ಜಿಲ್ಲಾ ಕಾರಾಗೃಹಕ್ಕೆ ರವಿವಾರ
ಮಧ್ಯಾಹ್ನ ವೇಳೆಗೆ ಪೊಲೀಸರು ದಿಢೀರ್ ದಾಳಿ
ನಡೆಸಿ ಪರಿಶೀಲನೆ ನಡೆಸಿದ್ದಾರೆ.ಮಂಗಳೂರು ನಗರ ಪೊಲೀಸ್ ಕಮೀಷನರ್ ಕುಲದೀಪ್ ಕುಮಾರ್ ಆರ್.ಜೈನ್ ನೇತೃತ್ವದಲ್ಲಿ ಈ ದಾಳಿ ನಡೆದಿದೆ. ಈ ವೇಳೆ ಡಿಸಿಪಿಗಳಾದ ಅಂಶುಕುಮಾರ್, ದಿನೇಶ್ ಕುಮಾರ್, ಎಸಿಪಿಗಳು,ಇನ್ಸ್ಪೆಕ್ಟರ್ ಗಳು, ಪಿಎಸ್ಐಗಳು ಸೇರಿದಂತೆ



300ಕ್ಕೂ ಅಧಿಕ ಮಂದಿ ಪೊಲೀಸ್ ಅಧಿಕಾರಿಗಳು,
ಸಿಬ್ಬಂದಿ ಭಾಗಿಯಾಗಿದ್ದಾರೆ. ಜೈಲಿನಲ್ಲಿ ಅಕ್ರಮ
ಚಟುವಟಿಕೆ ಮಾಹಿತಿ ಹಿನ್ನೆಲೆಯಲ್ಲಿ ದಿಢೀರ್
ತಪಾಸಣೆ ನಡೆಸಲಾಗಿದೆ. ಪೊಲೀಸ್ ಅಧಿಕಾರಿಗಳು
ಹಾಗೂ ಸಿಬ್ಬಂದಿ ಸತತ 1:15 ಗಂಟೆ ಜೈಲಿನೊಳಗಡೆ
ತಪಾಸಣೆ ನಡೆಸಿದ್ದಾರೆ. ತಪಾಸಣೆ ವೇಳೆ
ವಿಚಾರಣಾಧೀನ ಕೈದಿಗಳಲ್ಲಿ ಬೀಡಿ-ಸಿಗರೇಟ್,
ಗುಟ್ಕಾ, ತಂಬಾಕು ಪ್ಯಾಕೆಟ್ ಬಿಟ್ಟರೆ ಬೇರೇನು
ಪತ್ತೆಯಾಗಿಲ್ಲ.ಬಳಿಕ ನಗರ ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಆರ್ ಜೈನ್ ಪ್ರತಿಕ್ರಿಯಿಸಿ, ಅಧಿಕಾರಿಗಳುಸಿಬ್ಬಂದಿ ಸ್ಕ್ಯಾನ್ ಮಾಡಿ ಈ ದಾಳಿ ನಡೆಸಿದ್ದೇವೆ.

ಬೀಡಿ ಸಿಗರೇಟ್ ತಂಬಾಕು ಬಿಟ್ಟು ಬೇರೆನೂ ಸಿಕ್ಕಿಲ್ಲ.
ಜೈಲು ಅಧಿಕಾರಿಗಳು ಜೈಲು ಪ್ರವೇಶಕ್ಕೆ ಮುನ್ನ
ಪ್ರತಿಯೊಬ್ಬರನ್ನೂ ತಪಾಸಣೆ ನಡೆಸುತ್ತಿದ್ದಾರೆ. ಈ ಬಗ್ಗೆ
ಜೈಲ್ ಸೂಪರಿಂಟೆಂಡೆಂಟ್ ಜೊತೆ ಚರ್ಚೆ
ನಡೆಸಲಾಗಿದೆ. ಅಕ್ರಮ ಚಟುವಟಿಕೆಗಳ ಬಗ್ಗೆ
ಮಾಹಿತಿ ಹಿನ್ನೆಲೆಯಲ್ಲಿ ಈ ದಾಳಿ ನಡೆಸಿದ್ದೇವೆ. ಆದರೆ
ಸದ್ಯಕ್ಕೆ ಈ ಬಗ್ಗೆ ಯಾವುದೇ ಪೂರಕ ಸಾಕ್ಷ್ಯಗಳು
ಸಿಕ್ಕಿಲ್ಲ. ಕಾಲ ಕಾಲಕ್ಕೆ ತಪಾಸಣೆ ನಡೆಸುತ್ತಿದ್ದರೆ
ಅಕ್ರಮಕ್ಕೆ ಕಡಿವಾಣ ಬೀಳುತ್ತದೆ. ಮುಂದಿನ
ದಿನಗಳಲ್ಲಿಯೂ ತಪಾಸಣೆ ಮುಂದುವರಿಸುತ್ತೇವೆ
ಎಂದು ಹೇಳಿದರು.