ಡಿವೈಡರ್ ಗೆ ಡಿಕ್ಕಿ ಹೊಡೆದು ಕಾರು ಪಲ್ಟಿ : ಓರ್ವ ಮೃತ್ಯು

ಡಿವೈಡರ್ ಗೆ ಡಿಕ್ಕಿ ಹೊಡೆದು ಕಾರು ಪಲ್ಟಿ : ಓರ್ವ ಮೃತ್ಯು

ಬಂಟ್ವಾಳ: ಕಾರೊಂದು ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಎ.7 ರಂದು ರಾಷ್ಟ್ರೀಯ ಹೆದ್ದಾರಿ ಮಂಗಳೂರು ಬೆಂಗಳೂರು ರಸ್ತೆಯ ಬಿಸಿರೋಡಿನಲ್ಲಿ ನಡೆದಿದೆ.ನಂದರಬೆಟ್ಟು ನಿವಾಸಿ ಸದಾಶಿವ ಆಚಾರ್ಯ ಮೃತಪಟ್ಟ ವ್ಯಕ್ತಿ.
ಜೊತೆಗೆ ಸದಾಶಿವ ಅವರ ಮೊಮ್ಮಗ ಚಾಲಕ ಅಕಾಶ್, ಅಳಿಯ ಸುರೇಶ್ ಆಚಾರ್ಯ, ಮಗ ಗಣೇಶ್ ಆಚಾರ್ಯ ಅವರು ಅಲ್ಪಸ್ವಲ್ಪ ಗಾಯಗಳಿಂದ ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ.
ಎರಿಟಿಗ ಕಾರಿನಲ್ಲಿ ಪುತ್ತೂರಿನಿಂದ ದೇವರ ಕಾರ್ಯದಲ್ಲಿ ಭಾಗಿಯಾಗಿ ವಾಪಾಸು ಮನೆಗೆ ಬರುವ ವೇಳೆ ಬಿಸಿರೋಡಿನ ಅಜ್ಜಿಬೆಟ್ಟು ಕ್ರಾಸ್ ಸಮೀಪದಲ್ಲಿ ಈ ಅವಘಡ ಸಂಭವಿಸಿದೆ. ಚಾಲಕನ ಅಜಾಗರೂಕತೆಯಿಂದ ಡಿವೈಡರ್ ಗೆ ಗುದ್ದಿದ ಕಾರು ಅ ಬಳಿಕ ಪಲ್ಟಿಯಾಗಿದೆ.
ಕಾರಿನಲ್ಲಿ ಚಾಲಕ ಸೇರಿ ನಾಲ್ಕು ಜನ ಒಂದೇ ಮನೆಯವರು ಪ್ರಯಾಣಿಸುತ್ತಿದ್ದರು. ಪುತ್ತೂರು ಸಂಬಂಧಿಕರ ಮನೆಯಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಬಳಿಕ ಮನೆಗೆ ಇನ್ನೇನು ಕೇವಲ 5 ನಿಮಿಷಗಳ ಕಾಲದಲ್ಲಿ ಮುಟ್ಟುವ ಸಮಯದಲ್ಲಿ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಗಂಭೀರವಾಗಿ ತಲೆಗೆ ಗಾಯವಾಗಿದ್ದ ಸದಾಶಿವ ಅವರನ್ನು ಕೈಕಂಬ ಪರ್ಲಿಯಾ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅದಾಗಲೇ ಮೃತಪಟ್ಟ ಬಗ್ಗೆ ವೈದ್ಯರು ಮಾಹಿತಿ ನೀಡಿದ್ದಾರೆ.
ಮೆಲ್ಕಾರ್ ಟ್ರಾಫಿಕ್ ಪೋಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಎಸ್.ಐ.ಮೂರ್ತಿ ಅವರು ಬೇಟಿ ನೀಡಿದ್ದಾರೆ

ರಾಜ್ಯ