ರಾಜ್ಯ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸುಭ್ರಹ್ಮಣ್ಯಕ್ಕೆ ಭೇಟಿ:ಮುಖ್ಯಮಂತ್ರಿಯನ್ನು ಸ್ವಾಗತಿಸಿದ ಭಾಗೀರಥಿ ಮುರುಳ್ಯ ಮತ್ತು ಮೋಹನ್ ರಾಮ್ ಸುಳ್ಳಿ.

ರಾಜ್ಯ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸುಭ್ರಹ್ಮಣ್ಯಕ್ಕೆ ಭೇಟಿ:
ಮುಖ್ಯಮಂತ್ರಿಯನ್ನು ಸ್ವಾಗತಿಸಿದ ಭಾಗೀರಥಿ ಮುರುಳ್ಯ ಮತ್ತು ಮೋಹನ್ ರಾಮ್ ಸುಳ್ಳಿ.

ಸಿ ಎಂ ಬಸವರಾಜ್ ಬೊಮ್ಮಾಯಿ ಧರ್ಮಸ್ಥಳ ಮತ್ತು ಕುಕ್ಕೆ ಸುಬ್ರಹ್ಮಣ್ಯ ಯಾತ್ರೆ ಕೈಗೊಂಡಿದ್ದು ಇದೀಗ ಕುಕ್ಕೆ ಕ್ಷೇತ್ರಕ್ಕೆ ಆಗಮಿಸಿ ಪೂಜೆ ಸಲ್ಲಿಸಿದ್ದಾರೆ ಈ ಸಂದರ್ಭದಲ್ಲಿ ದೇವಸ್ಥಾನ ವತಿಯಿಂದ ವ್ಯವಸ್ಥಾಪನಾ ಸಮಿತಿ ಅದ್ಯಕ್ಷ ಮೋಹನ್ ರಾಮ್ ಸುಳ್ಳಿ ಅವರನ್ನು ಶಾಲು ಹೊದೆಸಿ ಸ್ವಾಗತಿಸಿದರು, ಈ ಸಂದರ್ಭ ಬಿ ಜೆ ಪಿ ಪಕ್ಷದ ವತಿಯಿಂದ ಸುಳ್ಯ ವಿಧಾನ ಸಭಾ ಕ್ಷೇತ್ರದ ಬಿ ಜೆ ಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಅವರನ್ನು ಅವರನ್ನು ಸ್ವಾಗತಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅದ್ಯಕ್ಷ ಹರೀಶ್ ಕಂಜಿಪಿಲಿ, ಮೀನುಗಾರಿಕಾ ನಿಗಮ ಅದ್ಯಕ್ಷ ಎ. ವಿ ತೀರ್ಥರಾಮ, ಸುಳ್ಯ ನಗರ ಪಂಚಾಯತ್ ಅದ್ಯಕ್ಷ ವಿನಯ್ ಕುಮಾರ್ ಕಂದಡ್ಕ, ಬಿಜೆಪಿ ಮಂಡಲ ಸಮಿತಿ ಪ್ರ .ಕಾರ್ಯದರ್ಶಿ ಸುಬೋದ್ ಶೆಟ್ಟಿ ಮೇನಾಲ, ವೆಂಕಟ್ ದಂಬೆಕೋಡಿ ಮೊದಲಾದವರಿದ್ದರು.

ಪೋಟೊ: ಶಿವಭಟ್ ಸುಬ್ರಹ್ಮಣ್ಯ.

ರಾಜ್ಯ