
ಸುಳ್ಯ ತಾಲೋಕಿನ ಸಂಪಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಜೇನು ತೆಗಿಯಲೆಂದು ಮರ ಹತ್ತಿದ್ದ ಯುವಕನೋರ್ವ ಮರದಿಂದ ಬಿದ್ದು ದಾರುಣವಾಗಿ ಮೃತಪಟ್ಟ ಘಟನೆ ಎ.18 ರ ಸಂಜೆ 7.30 ಹೊತ್ತಿಗೆ ನಡೆದಿದೆ ಮೃತಪಟ್ಟ ಯುವಕನನ್ನು ಕರಿಕೆ ಮೂಲದ ವಿಜಯ್ ಎಂದು ತಿಳಿದು ಬಂದಿದೆ, ಕರಿಕೆಯಿಂದ ಮೂವರು ಜೇನು ತೆಗೆಯಲೆಂದು ಸಂಪಾಜೆಗೆ ಬಂದಿದದ್ದರು ಎಂದು ಹೇಳಲಾಗಿದೆ, ಜೇನು ತೆಗೆಯುತ್ತಿದ್ದ ಸಂದರ್ಭ ಆಯ ತಪ್ಪಿ ಬಿದ್ದ ವಿಜಯ್ ಗಂಭೀರ ಗಾಯಗೊಂಡರೆಂದು ಕೂಡಲೆ ಜೊತೆಗಿದ್ದವರು ಆತನನ್ನು ಆಸ್ಪತ್ರೆಗೆ ಸಾಗಿಸಲು ತಯಾರಿಯಲ್ಲಿದ್ದಾಗಲೇ ಆತ ಮೃತಪ್ಪಟ್ಟಿದ್ದ ಎನ್ನಲಾಗಿದೆ, ಇದೀಗ ಮೃತದೇಹವನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.

