ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಿಂದ ಬಡ, ಮತ್ತು ಪ್ರತಿಭಾವಂತ ಮಕ್ಕಳಿಗಾಗಿ ಉಚಿತ ವಸತಿ ಶಾಲೆ:ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ

ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಿಂದ ಬಡ, ಮತ್ತು ಪ್ರತಿಭಾವಂತ ಮಕ್ಕಳಿಗಾಗಿ ಉಚಿತ ವಸತಿ ಶಾಲೆ:
ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ

ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಿಂದ ಬಡ, ಮತ್ತು ಪ್ರತಿಭಾವಂತ ಮಕ್ಕಳಿಗಾಗಿ ಉಚಿತ ವಸತಿ ಶಾಲೆ ಸ್ಥಾಪಿಸಲಾಗಿದೆ ಎಂದು ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಮಾದ್ಯಮ ಹೇಳಿಕೆ ತಿಳಿಸಿದ್ದಾರೆ.ಅವರು
ಚಿಕ್ಕಬಳ್ಳಾಪುರ ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಆವರಣದಲ್ಲಿ ಎ.23ರ ಸಂಜೆ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ತಿಳಿಸಿದ್ದಾರೆ. SAMVIT ಶ್ರೀ ಆದಿಚುಂಚನಗಿರಿ ಮಠ ವಿಜ್ಞಾತಂ ಇನ್ಸಿಟ್ಯೂಟ್ ಫಾರ್ ಟಾಲೆಂಟೆಡ್, ಶ್ರೀ ಆದಿಚುಂಚನಗಿರಿ ಪ್ರತಿಭಾವಂತ ಮಕ್ಕಳ ಉಚಿತ ವಸತಿ ಶಾಲೆಯ ಬಗ್ಗೆ ಸಂಕ್ಷಿಪ್ತ ಮಾಹಿತಿ ನೀಡಿದರು. ‘ಸೇವೆಯೇ ಪೂಜೆ’ ಎಂಬ ಧ್ಯೇಯ ವಾಕ್ಯದೊಂದಿಗೆ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠವು ಬಡ, ಮತ್ತು ಪ್ರತಿಭಾವಂತ ಮಕ್ಕಳಿಗಾಗಿ ಉಚಿತ ವಸತಿ ಶಾಲೆಯನ್ನು ಪ್ರಾರಂಭಿಸಿದೆ. ಈ ಶಾಲೆಯು ಭೈರವೈಕ್ಯ ಪರಮಪೂಜ್ಯ ಜಗದ್ಗುರು ಶ್ರೀಶ್ರೀಶ್ರೀ ಡಾ॥ ಬಾಲಗಂಗಾಧರನಾಥ ಮಹಾ ಸ್ವಾಮೀಜಿಯವರ ಕನಸಾಗಿದೆ. ಈ ಕನಸನ್ನು ನನಸಾಗಿಸಲು 72ನೇ ಪೀಠಾಧಿಪತಿಗಳಾದ ಪರಮಪೂಜ್ಯ ಜಗದ್ಗುರು ಶ್ರೀಶ್ರೀಶ್ರೀ ಡಾ॥ ನಿರ್ಮಲಾನಂದನಾಥ ಮಹಾ ಸ್ವಾಮೀಜಿಯವರು ಸಂಕಲ್ಪಮಾಡಿ ನಂದಿ ಗಿರಿಧಾಮದ, ತಪ್ಪಲಿನ ಪ್ರಶಾಂತ ವಾತಾವರಣದಲ್ಲಿ ಬಡಮಕ್ಕಳ ಉಚಿತ ವಸತಿ ಶಾಲೆಯನ್ನು ಪ್ರಾರಂಭಿಸುತ್ತಿದ್ದಾರೆ.


ಈ ಶಾಲೆಯಲ್ಲಿ 6 ರಿಂದ 12 ನೇ ತರಗತಿಗಳವರೆಗೆ ಪ್ರತಿಭಾವಂತ ಮಕ್ಕಳಿಗೆ ಮೀಸಲಿಡಲಾಗಿದೆ. ಈ ಶಾಲೆಯಲ್ಲಿ ಶಿಸ್ತು, ದೇಶಭಕ್ತಿ ಮತ್ತು ವ್ಯಕ್ತಿತ್ವ ವಿಕಸನದಂತಹ ಗುಣಾತ್ಮಕ ಅಂಶಗಳಿಗೆ ಒತ್ತುನೀಡಲಾಗಿದ್ದು, ಅರ್ಹ ಫಲಾನುಭವಿಗಳು ಸುವರ್ಣಾವಕಾಶವನ್ನು ಪಡೆಯಬಹುದಾಗಿದೆ
ಎಂದು ಮಾಹಿತಿ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಪೂಜ್ಯ ಶ್ರೀ ಶ್ರೀ ಮಂಗಳನಾಥ ಸ್ವಾಮೀಜಿಯವರು, ಪ್ರಾಂಶುಪಾಲರಾದ ಡಾ. ರಾಜು ಅವರು, ಚಿಕ್ಕಬಳ್ಳಾಪುರ ವಿಭಾಗದ CAO ಡಾ. ಶಿವರಾಮ ರೆಡ್ಡಿ ಅವರು ಉಪಸ್ಥಿತರಿದ್ದರು.

ರಾಜ್ಯ