
ಸುಳ್ಯ:ಸುಳ್ಯ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಹೆಚ್.ಎಲ್ ವೆಂಕಟೇಶ್ ಕಡಬ ಭಾಗದಲ್ಲಿ ಇಂದು ಬಿರುಸಿನ ಪ್ರಚಾರ ನಡೆಸಿದರು.ಕಡಬ ನಗರದ ರಿಕ್ಷಾ ಚಾಲಕರನ್ನು ಭೇಟಿಯಾಗಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ರಿಕ್ಷಾ ಚಾಲಕರಿಗೆ ರೂ.2 ಸಾವಿರ ಸಹಾಯ ಹಾಗು ಕೃಷಿಕರಿಗೆ ನೀಡುವ ಭತ್ಯೆ ಹಾಗೂ ತಮ್ಮ ಪ್ರಣಾಳಿಕೆಯಲ್ಲಿನ ಯೋಜನೆಗಳ ವಿವರಗಳನ್ನು ನೀಡಿ ಮತ ಯಾಚಿಸಿದರು.
ಈ ಸಂದರ್ಭದಲ್ಲಿ ಸುಳ್ಯ ತಾಲೂಕು ಅಧ್ಯಕ್ಷ ಸುಕುಮಾರ್ ಕೋಡ್ತುಗುಳಿ, ಕಡಬ ಅಧ್ಯಕ್ಷ ಮೀರಾ ಸಾಹೇಬ್, ಕಾರ್ಯದರ್ಶಿ ರಾಕೇಶ್ ಕುಂಟಿಕಾನ ಸೇರಿ ಪಕ್ಷದ ಕಾರ್ಯಕರ್ತರು ಬೆಂಬಲಿಗರು ಉಪಸ್ಥಿತರಿದ್ದರು.

