ಕಡಬದ ಖತರ್ನಾಕ್ ಕಳ್ಳರ ಗ್ಯಾಂಗನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಬಂದಾರು ಗ್ರಾಮಸ್ಥರು..!!

ಕಡಬದ ಖತರ್ನಾಕ್ ಕಳ್ಳರ ಗ್ಯಾಂಗನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಬಂದಾರು ಗ್ರಾಮಸ್ಥರು..!!

ಧರ್ಮಸ್ಥಳ ಠಾಣಾ ವ್ಯಾಪ್ತಿಯ ಶಾಲೆಯೊಂದರಿಂದ ಇನ್ವಾರ್ಟರ್ ಮತ್ತು ಕಂಪ್ಯೂಟರ್ ಕದಿಯಲು ಯತ್ನಿಸುತ್ತಿದ್ದ ವೇಳೆ ಕಳ್ಳರನ್ನು ಅಲ್ಲಿನ ಊರವರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಎ.30ರಂದು ವರದಿಯಾಗಿದೆ.

ಧರ್ಮಸ್ಥಳ ಸಮೀಪದ ಸರಕಾರಿ ಪ್ರೌಢಶಾಲೆ ಪೆರ್ಲ ಬೈಪಾಡಿ ಬಂದಾರಿನಲ್ಲಿ ರಾತ್ರಿ 12 ಗಂಟೆ ಸುಮಾರಿಗೆ 4 ಜನ ಕಳ್ಳರು ನುಗ್ಗಿರುವುದನ್ನು ಗಮನಿಸಿ ಸ್ಥಳೀಯರು ಶಾಲಾ ವಠಾರದಲ್ಲಿ ಒಟ್ಟು ಸೇರಿ ಹಿಡಿದು ಹಿಗ್ಗಾಮುಗ್ಗ ಥಳಿಸಿದ್ದಾರೆ ಎನ್ನಲಾಗಿದೆ. ಕಳ್ಳರನ್ನು ಹಿಡಿದು ಎಳೆದೊಯ್ಯುತ್ತಿರುವ ವೀಡಿಯೋ ವೈರಲ್ ಆಗಿದೆ.

ಈ ಕಳ್ಳರ ಗ್ಯಾಂಗ್ ಕಡಬ ಪರಿಸರದವರು ಎಂದು ತಿಳಿದು ಬಂದಿದೆ. ಇವರೆಲ್ಲರೂ ಸಂಘಟನೆಯೊಂದರಲ್ಲಿ ಸಕ್ರಿಯರಾಗಿದ್ದವರು ಎಂದು ಹೇಳಲಾಗುತ್ತಿದೆ. ಕಡಬ ಪರಿಸರದಲ್ಲಿ ಈ ಹಿಂದೆ ಹಲವು ಮನೆ ಕಳ್ಳತನ, ಟಯರ್ ಕಳ್ಳತನ,ಬಿದಿ ಬದಿ ಸೋಲಾರ್ ಬ್ಯಾಟರಿ ಕಳ್ಳತನ ನಡೆದಿದ್ದು ಈ ತಂಡವೇ ಕೃತ್ಯಗಳನ್ನು ಮಾಡಿರಬಹುದೆಂದು ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗುತ್ತಿದೆ. ಪೊಲೀಸರ ಸೂಕ್ತ ತನಿಖೆಯಿಂದ ಇನ್ನಷ್ಟು ಮಾಹಿತಿಗಳು ಲಭ್ಯವಾಗಲಿದೆ.

ರಾಜ್ಯ