
ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಹೆಚ್.ಎಲ್ ವೆಂಕಟೇಶ್ ಅವರು ಜಾಲ್ಸೂರು, ಕನಕಮಜಲು ಗ್ರಾಮದಲ್ಲಿ ಚುನಾವಣಾ ಪ್ರಚಾರ ನಡೆಸಿದ್ದಾರೆ. ಅಲ್ಲದೆ ಕ್ಷೇತ್ರದ ವಿವಿಧ ಕಡೆಗಳಲ್ಲಿ ಮತದಾರರನ್ನು ಭೇಟಿ ಮಾಡಿ ಮಾತುಕತೆ ನಡೆಸಿ ಮತ ಯಾಚಿಸಿದ್ದಾರೆ. ಜೆಡಿಎಸ್ ಪ್ರಣಾಳಿಕೆಯ ಬಗ್ಗೆ ತಿಳಿಸಿದ್ದಾರೆ. ಇವರ ಜೊತೆ ಜೆಡಿಎಸ್ ಸುಳ್ಯ ತಾಲೂಕು ಅಧ್ಯಕ್ಷ ಸುಕುಮಾರ್ ಕೋಡ್ತುಗುಳಿ, ಪ್ರಧಾನ ಕಾರ್ಯದರ್ಶಿ ರಾಕೇಶ್ ಕುಂಟಿಕಾನ ಮತ್ತಿತರರು ಉಪಸ್ಥಿತರಿದ್ದರು.
