
ಗೂನಡ್ಕದಲ್ಲಿ ಕಾರು ಮತ್ತು ಸ್ಕೂಟರ್ ನಡುವೆ ಅಪಘಾತ ಸಂಭವಿಸಿ ಸ್ಕೂಟರ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ನಡೆದಿದೆ ಮೇ 23 ರಂದು ಗೂನಡ್ಕ ದಿಂದ ಸುಳ್ಯ ಕಡೆಗೆ ಬರುತ್ತಿದ್ದ ಮುತ್ತೂಟು ಪೈನಾನ್ಸ್ ಸಂಸ್ಥೆಯ ಉದ್ಯೋಗಿ ನವೀನ್ ಸಂಕೇಶ ಬರುತ್ತಿದ್ದ ವೇಳೆ ಸುಬ್ರಹ್ಮಣ್ಯದಿಂದ ಮಡಿಕೇರಿ ಕಡೆಗೆ ಹೋಗುತ್ತಿದ್ದ ಕಾರು ಡಿಕ್ಕಿಯಾಗಿದೆ ಘಟನೆಯಲ್ಲಿ ನೆಲಕ್ಕೆ ಅಪ್ಪಳಿಸಿದ ನವೀನ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಅವರಿಗೆ 26 ವರ್ಷ ವಯಸ್ಸಾಗಿತ್ತು,





