ಜಾಗದ ವ್ಯಾಜ್ಯ: ಮಾತು ಬಾರದ ಕಾರ್ಮಿಕನಿಗೆ ಥಳಿಸಿದ ತಂಡ : ಆಸ್ಪತ್ರೆ ದಾಖಲು.

ಜಾಗದ ವ್ಯಾಜ್ಯ: ಮಾತು ಬಾರದ ಕಾರ್ಮಿಕನಿಗೆ ಥಳಿಸಿದ ತಂಡ : ಆಸ್ಪತ್ರೆ ದಾಖಲು.

ದಾರಿಯಲ್ಲಿ ನಡೆದು ಹೋಗುತ್ತಿದ್ದ ವೇಳೆ ತಂಡವೊಂದು ಹಲ್ಲೆ ನಡೆಸಿದೆ ಎಂದು ಮಾತು ಬಾರದ ಕಾರ್ಮಿಕರೊಬ್ಬರು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.
ನೆಲ್ಯಾಡಿ ಸೈಂಟ್ ಜಾರ್ಜ್ ಕಾಲೇಜು ಬಳಿ ಸಿಮೆಂಟ್ ಇಟ್ಟಿಗೆ ತಯಾರಿಕ ಘಟಕವಾದ ನಯನ ಟ್ರೇಡರ್‍ಸ್‌ನ ಕೂಲಿ ಕಾರ್ಮಿಕ ಉತ್ತರ ಪ್ರದೇಶ ಮೂಲದ ಲಡ್ಡು(34ವ)ರವರು ಗಾಯಗೊಂಡವರು.
ಕಿವಿ ಕೇಳಿಸದ ಮತ್ತು ಮಾತು ಬರದವರಾಗಿದ್ದರಿಂದ ಲಡ್ಡು ಅವರು ಘಟನೆಯನ್ನು ಹಿಂದಿಯಲ್ಲಿ ಬರೆದಿದ್ದಾರೆ. ನಾನು ಸುಮಾರು 10 ವರ್ಷಗಳಿಂದ ನೆಲ್ಯಾಡಿ ವಿ ಜೆ ಜೋಸೆಪ್ ಅವರ ಮಾಲಕತ್ವದದ ನಯನ ಟ್ರೇಡರ್‍ಸ್‌ನಲ್ಲಿ ಕೆಲಸ ಮಾಡುತ್ತಿದ್ದು, ಜೂ. 13ರಂದು ಬೆಳಿಗ್ಗೆ ಕೆಲಸ ಮುಗಿಸಿ ರಸ್ತೆ ಬದಿಯಲ್ಲಿ ನಡೆದು ಹೋಗುತ್ತಿದ್ದ ವೇಳೆ ತಂಡ ಅವಾಚ್ಯ ಶಬ್ದಗಳಿಂದ ನಿಂದಿಸಿ, ದೊಣ್ಣೆಯಿಂದ ಹಲ್ಲೆ ನಡೆಸಿದ್ದಾರೆ’ ಎಂದು ಆರೋಪಿಸಿದ್ದಾರೆ. ಜಾಗದ ವಿಚಾರಕ್ಕೆ ಸಂಬಂಧಿಸಿ ಈ ಹಲ್ಲೆ ನಡೆದಿದೆ ಎನ್ನಲಾಗಿದೆ

ರಾಜ್ಯ