
ಪುತ್ತೂರು: ಉಪ್ಪಿನಂಗಡಿ ಪುತ್ತೂರು ರಸ್ತೆಯ ಕೆಮ್ಮಾಯಿ ಪೆಟ್ರೋಲ್ ಬಂಕ್ ಬಳಿ ನಡೆದ ಬೈಕ್ ಅಪಘಾತದಲ್ಲಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

ಸೇಡಿಯಾಪು ಬಳಿಯ ನಿವಾಸಿ ಚೈತ್ರೇಶ್ ಯಾನೆ ಚರಣ್ ಮೃತ ಬೈಕ್ ಸವಾರ. ರಸ್ತೆಯಲ್ಲಿ ನೀರು ನಿಂತು ಬೇರೆ ವಾಹನದ ಬೆಳಕಿನಿಂದ ನೀರು ಕಾಣದೆ ಬೈಕ್ ಸ್ಕಿಡ್ ಆಗಿ ಬಿದ್ದಿದೆ ಎಂದು ಹೇಳಲಾಗಿದೆ. ಬೈಕ್ ರಸ್ತೆಯಲ್ಲಿ ಜಾರುತ್ತಿದ್ದಂತೆ, ಸವಾರನ ತಲೆ ವಿಭಜಕಕ್ಕೆ ಬಡಿದಿದೆ. ಇದರಿಂದ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಸ್ಥಳಕ್ಕೆ ಸಂಚಾರ ಠಾಣೆಯ ಪೊಲೀಸರು ತೆರಳಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
