
ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರ ಸಂಸತ್ ಸದಸ್ಯ ಸ್ಥಾನವನ್ನು ಅನರ್ಹ ಮಾಡಿದ ಮತ್ತು ವಿಧಿಸಿದ ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದ್ದು ಇದು ಪ್ರಜಾಪ್ರಭುತ್ವ ವ್ಯವಸ್ಥೆ ಹಾಗೂ ಸತ್ಯಕ್ಕೆ ಸಿಕ್ಕಿದ ಜಯ. ನ್ಯಾಯಾಲಯ ನೀಡಿದ ತೀರ್ಪನ್ನು ನಾವು ಸ್ವಾಗತಿಸುತ್ತೇವೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ್ ಹೇಳಿದ್ದಾರೆ.ಅವರು
ಆ.೫ರಂದು ಸುಳ್ಯ ಪ್ರೆಸ್ ಕ್ಲಬ್ನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ ರಾಹುಲ್ ಗಾಂಧಿಯವರು ಸಂಸತ್ನಲ್ಲಿ ಆಳ್ವ ಪಕ್ಷದ ವಿರುದ್ದ ಧ್ವನಿ ಎತ್ತುವುದನ್ನು ನಿಲ್ಲಿಸುವ ಉದ್ದೇಶದಿಂದ ಅವರನ್ನು ಅನರ್ಹ ಮಾಡಲಾಗಿತ್ತು. ಅವರಿಗೆ ಶಿಕ್ಷೆಯೂ ಆಗಿತ್ತು. ಇದೀಗ ಆ ಶಿಕ್ಷೆಗೆ ನ್ಯಾಯಾಲಯ ತಡೆ ನೀಡಿದೆ. ಇದೀಗ ಮತ್ತೆ ಅವರು ಸಂಸತ್ನಲ್ಲಿ ಸತ್ಯದ ಪರ ಧ್ವನಿ ಮೊಳಗಲಿದೆ ಎಂದು ಅವರು ಹೇಳಿದರು .


ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದೆ. ಶಕ್ತಿಯೋಜನೆ, ಅನ್ನಭಾಗ್ಯ ಯೋಜನೆ ಈಗಾಗಲೇ ನೀಡಲಾಗುತ್ತಿದ್ದು, ಗೃಹಜ್ಯೋತಿಗೆ ಚಾಲನೆ ನೀಡಲಾಗಿದೆ. ಆ.೧೫ ರಂದು ಗೃಹಲಕ್ಷ್ಮೀ ಯೋಜನೆಗೆ ಅಧಿಕೃತ ಚಾಲನೆ ದೊರೆಯಲಿದೆ ಎಂದು ಹೇಳಿದ ಅವರು ಈ ಯೋಜನೆಯನ್ನು ಮನೆ ಮನೆಗೆ ತಲುಪಿಸಲು ಕಾಂಗ್ರೆಸ್ ಕಾರ್ಯಕರ್ತರು ಕೆಲಸ ಮಾಡಲಿದ್ದಾರೆ ಎಂದು ಹೇಳಿದರು.
ಗ್ಯಾರಂಂಟಿ ಯೋಜನೆ ಚರಿತ್ರೆ ಸೃಷ್ಠಿಸಿದೆ. ದೊಡ್ಡ ಯೋಜನೆ. ಇದು ಜಾರಿ ಆಗುವುದೇ ಇಲ್ಲ ಎಂಬ ಮಾತುಗಳು ಕೇಳಿ ಬರುತ್ತಿತ್ತು. ಆದರೆ ಈಗ ನಾವು ಕೊಟ್ಟ ಮಾತಿನಂತೆ ನಡೆದುಕೊಂಡಿವೆ ಎಂದು ಡಿಸಿಸಿ ಉಪಾಧ್ಯಕ್ಷ ಎನ್.ಜಯಪ್ರಕಾಶ್ ರೈ ಹೇಳಿದರು.
ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪಿ.ಎಸ್. ಗಂಗಾಧರ್ ಮಾತನಾಡಿ,೧೧೦ ಕೆ.ವಿ. ಕಾಮಗಾರಿಗೆ ಸದ್ಯದಲ್ಲಿಯೇ ಆರಂಭವಾಗಲಿದೆ ಗುತ್ತಿಗೆದಾರರು ಬಂದು ಸೈಟ್ ಪರಿಶೀಲನೆ ಮಾಡಿದ್ದಾರೆ. ಕಾಂಗ್ರೆಸ್ ಸರಕಾರ ಬಂದ ಮೇಲೆ ಕೆಲಸಕ್ಕೆ ಚಾಲನೆ ದೊರೆತಿದೆ ಎಂದ ಅವರು ರೇಶನ್ ಕಾರ್ಡ್ ಕೊಡಬೇಕೆಂದು ಜಿಲ್ಲೆಯಲ್ಲಿ ೧೩ ಸಾವಿರ ಅರ್ಜಿಗಳು ಬಂದಿದೆ. ಬೆಳೆ ವಿಮೆ ಪಾವತಿಸಲು ಅವಕಾಶ ವಿಸ್ತರಿಸಲಾಗಿದೆ ಎಂದು ಅವರು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ನಾಯಕಾರದ ಎಸ್.ಸಂಶುದ್ದೀನ್, ಡೇವಿಡ್ ದೀರಾ ಕ್ರಾಸ್ತ, ನಂದರಾಜ್ ಸಂಕೇಶ್, ಸುರೇಶ್ ಎಂ.ಹೆಚ್. ಇದ್ದರು.
