ಸುಳ್ಯದಲ್ಲಿ ವೆಂಕಟರಮಣ ಗೌಡರ 10ನೇ ವರ್ಷದ ಪುಣ್ಯ ಸ್ಮರಣೆ: ಪುತ್ಥಳಿಗೆ ಪುಷ್ಪಾರ್ಚನೆ ಮಾಡಿ ಗೌರವ ಸಮರ್ಪಿಸಿದ AOLE ಅಧ್ಯಕ್ಷರು.

ಸುಳ್ಯದಲ್ಲಿ ವೆಂಕಟರಮಣ ಗೌಡರ 10ನೇ ವರ್ಷದ ಪುಣ್ಯ ಸ್ಮರಣೆ: ಪುತ್ಥಳಿಗೆ ಪುಷ್ಪಾರ್ಚನೆ ಮಾಡಿ ಗೌರವ ಸಮರ್ಪಿಸಿದ AOLE ಅಧ್ಯಕ್ಷರು.

ಸುಳ್ಯ ಶಿಕ್ಷಣ ಕಾಶಿಯ ನಿರ್ಮಾತೃ ಡಾ. ಕುರುಂಜಿ ವೆಂಕಟರಮಣ ಗೌಡರ 10ನೇ ವರ್ಷದ ಪುಣ್ಯ ಸ್ಮರಣೆಯನ್ನು ಸುಳ್ಯದ ಕೆವಿಜಿ ಜಂಕ್ಷನ್ ನಲ್ಲಿ ವೆಂಕಟರಮಣ ಗೌಡರ ಪುತ್ಥಳಿಗೆ ಪುಷ್ಪ ನಮನ ಸಲ್ಲಿಸುವ ಮೂಲಕ ಗೌರವ ಸಮರ್ಪಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ) ಅಧ್ಯಕ್ಷ ಡಾ| ಕೆ.ವಿ ಚಿದಾನಂದರು, ತಂದೆಯವರ ಆದರ್ಶಗಳು ಬದುಕಿನ ದಾರಿ ದೀಪ.ಅವರಲ್ಲಿದ್ದ ಶಿಸ್ತು , ಸಂಯಮ, ಕಠಿಣ ಶ್ರಮ , ತ್ಯಾಗಗಳು ಇಂದು ಸುಳ್ಯದಂತ ಸಣ್ಣ ಊರಿನಲ್ಲಿ ದೊಡ್ಡ ಮಟ್ಟದ ಶಿಕ್ಷಣ ಕೇಂದ್ರ ತೆರೆದು ಕೊಳ್ಳಲು ಸಾಧ್ಯವಾಗಿದೆ ,ಪೂಜ್ಯರ ಕನಸಿನಂತೆ ಸುಳ್ಯದಲ್ಲಿ ಕ್ಯಾನ್ಸರ್ ಆಸ್ಪತ್ರೆಯನ್ನು ತೆರೆಯುವ ಯೋಜನೆ ಇದೆ,ಎಂದು ಹೇಳಿದರು.


ಮಾಜಿ ನಗರ ಪಂಚಾಯತ್ ಅಧ್ಯಕ್ಷ ವಿನಯ್ ಕುಮಾರ್ ಕಂದಡ್ಕ, ದಿವಂಗತ ಕುರುಂಜಿ ವೆಂಕಟರಮಣ ಗೌಡರು ಇಲ್ಲದಿರುತ್ತಿದ್ದರೆ ಸುಳ್ಯದಲ್ಲಿ ಇಷ್ಟು ದೊಡ್ಡ ಶಿಕ್ಷಣ ಸಂಸ್ಥೆಗಳು ಸಾಧ್ಯವಾಗುತ್ತಿರಲಿಲ್ಲ. ಸಾವಿರಾರು ಜನರಿಗೆ ಶಿಕ್ಷಣವನ್ನು ಉಣಿಸಿರುವ ಕುರುಂಜಿಯವರ ಆದರ್ಶ ಎಲ್ಲರಿಗೂ ಸ್ಫೂರ್ತಿ ಎಂದು ತಿಳಿಸಿದರು.

ಇದೇ ವೇಳೆ ಮಾತನಾಡಿದ ಇಂಜಿನಿಯರಿಂಗ್ ಕಾಲೇಜಿನ ನಿವೃತ್ತ ಪ್ರಾಂ‍ಶುಪಾಲ ಜ್ಞಾನೇಶ್ ಎನ್ ಎ ಕುರುಂಜಿಯವರೊಂದಿಗಿನ ಒಡನಾಟವನ್ನು ಹಂಚಿಕೊಂಡರು
ಅಕಾಡಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ) ಪ್ರಧಾನ ಕಾರ್ಯದರ್ಶಿ ಅಕ್ಷಯ್ ಕೆ.ಸಿ, ಅಕಾಡಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ) ಉಪಾಧ್ಯಕ್ಷೆ ಶೋಭಾ ಚಿದಾನಂದ, ಕೆವಿಜಿ ಆಯುರ್ವೇದ ಕಾಲೇಜಿನ ಪ್ರಾಂಶುಪಾಲ ಡಾ| ಡಿವಿ ಲೀಲಾಧರ್, ಕೆವಿಜಿ ಮೆಡಿಕಲ್ ಕಾಲೇಜಿನ ಡೀನ್ ನಿಲಾಂಬಿಕೈ ನಟರಾಜನ್, ಕೆವಿಜಿ ಮೆಡಿಕಲ್ ಕಾಲೇಜಿನ ಎಮಿರಿಟಸ್ ವಿಭಾಗದ ಪ್ರೊ ಶೀಲಾ ಜಿ ನಾಯಕ್‌, ಭಾರತೀಯ ರೆಡ್ ಕ್ರಾಸ್ ಸುಳ್ಯದ ಸಭಾಪತಿ ಸುಧಾಕರ್ ರೈ, ಗೌಡ ಒಕ್ಕಲಿಗ ಸಂಘದ ಅಧ್ಯಕ್ಷ ಚಂದ್ರ ಕೋಲ್ಚಾರ್, ಸುಳ್ಯ ರೋಟರಿ ಕ್ಲಬ್ ಅಧ್ಯಕ್ಷ ಚಂದ್ರಶೇಖರ ಪೇರಾಲು ಮತ್ತಿತರರು ಉಪಸ್ಥಿತರಿದ್ದರು.

ರಾಜ್ಯ