
ಸುಳ್ಯ ಕುರುಂಜಿಗುಡ್ಡೆ ಕೃಷ್ಣಪ್ಪ ಪೂಜಾರಿಯವರ ಪುತ್ರ, ಕೆವಿಜಿ ವಿದ್ಯಾಸಂಸ್ಥೆಯಲ್ಲಿ ಎಲೆಕ್ಟ್ರೀಷಿಯನ್ ಆಗಿದ್ದ ವಸಂತ ಕುರುಂಜಿಗುಡ್ಡೆ(೩೯) ಯವರ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ವಾರಗಳ ಹಿಂದೆ ಬ್ರೈನ್ ಹ್ಯಾಮರೇಜ್ ನಿಂದಾಗಿ ಅಸ್ವಸ್ಥಗೊಂಡ ಅವರನ್ನು ಸುಳ್ಯಆಸ್ಪತ್ರೆಗೆ ಕರೆತಂದು ಬಳಿಕ ಮಂಗಳೂರಿನ ಫಸ್ಟ್ನ್ಯೂರೋ ಆಸ್ಪತ್ರೆ ಕರೆದೊಯ್ಯಲಾಗಿತ್ತು. ಅಲ್ಲಿ ಶಸ್ತ್ರ ಚಿಕಿತ್ಸೆ ಕೂಡಾ ಮಾಡಲಾಗಿತ್ತು. ನಿನ್ನೆ ರಾತ್ರಿ ಮತ್ತೆ ಅಸೌಖ್ಯ ಉಲ್ಬಣಗೊಂಡು ಇಂದು ಮುಂಜಾನೆ ವೇಳೆ ಮೃತಪಟ್ಟರೆಂದು ತಿಳಿದುಬಂದಿದೆ.

