
ಮಂಗಳೂರು: ಜೀವಕಂಟಕವಾಗುತ್ತಿರುವ ಸಿಟಿ ಬಸ್ ಗಳ ಅಟಾಟೋಪಗಳಿಗೆ ಕಡಿವಾಣ ಹಾಕಲು ಬಸ್ ಮಾಲಕರೊಂದಿಗೆ ಸಭೆ ನಡೆಸಿ ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ ವಾಲ್ ಖಡಕ್ ವಾರ್ನಿಂಗ್ ನೀಡಿದರು.
ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಬುಧವಾರ ನಡೆದ ಈ ಸಭೆಯಲ್ಲಿ ಆರ್ ಟಿ ಒ ಅಧಿಕಾರಿ, ಮನಪಾ ಇಂಜಿನಿಯರ್, ಎನ್ಎಚ್ಒ ಅಧಿಕಾರಿ, ಸ್ಮಾರ್ಟ್ ಸಿಟಿ ಅಧಿಕಾರಿಗಳ ಉಪಸ್ಥಿತಿಯಲ್ಲಿ ಸಿಟಿ ಬಸ್ ಗಳೊಂದಿಗೆ ಸಭೆ ನಡೆಸಲಾಗಿದೆ.
ಬಸ್ ಮಾಲಕರೊಂದಿಗೆ ಬಹಳಷ್ಟು ಸಭೆಗಳು ನಡೆದಿದ್ದರೂ, ಇದೇ ಮೊದಲ ಬಾರಿಗೆ ಕಳೆದ ಕೆಲದಿನಗಳಲ್ಲಿ ನಡೆದಿರುವ ಅಪಘಾತಗಳನ್ನು, ಅಡ್ಡಾದಿಡ್ಡಿ ಬಸ್ ಗಳ ಸಂಚಾರ, ನಿರ್ಲಕ್ಷ್ಯದ ಚಾಲನೆಗಳ ಬಗ್ಗೆ ವೀಡಿಯೋ ಮೂಲಕ ಬಸ್ ಮಾಲಕರಿಗೆ ಮನದಟ್ಟು ಮಾಡಲಾಯಿತು.
ಇತ್ತೀಚಿಗೆ ನಡೆದ ವಿವಿಧ ಭೀಕರ ಅಪಘಾತಗಳ ವೀಡಿಯೋಗಳನ್ನು ತೋರಿಸಿ ಬಸ್ ಮಾಲೀಕರಿಗೆ ಕಮಿಷನರ್ ಕ್ಲಾಸ್ ತೆಗೆದುಕೊಂಡರು.
ಅತಿವೇಗದ ಚಾಲನೆ, ನಿರ್ಲಕ್ಷ್ಯದ ಚಾಲನೆ, ಟೈಮ್ ಕೀಪಿಂಗ್ ಹಾಗೂ ಸಂಚಾರ ನಿಯಮಗಳ ಉಲ್ಲಂಘನೆ ಬಗ್ಗೆ ಎಚ್ಚರಿಕೆ ನೀಡಿ, ಬಸ್ ಟೈಮಿಂಗ್ ರೇಷನಲೈಜ್ ಮಾಡುವ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು.
ಬಸ್ ಮಾಲಕರು ತಮ್ಮ ಚಾಲಕ ಹಾಗೂ ನಿರ್ವಾಹಕರಿಗೆ ಸ್ಪಷ್ಟ ಎಚ್ಚರಿಕೆ ನೀಡಬೇಕು. ಇಲ್ಲವಾದಲ್ಲಿ ಚಾಲಕರ ಚಾಲನ ಪರವಾನಿಗೆ ರದ್ದು ಮಾಡಲಾಗುವುದು