

ಪೆರಾಜೆ ಗ್ರಾಮ ಪಂಚಾಯತ್ ಯಲ್ಲಿ
ಅ.02 ರಂದು ಗಾಂಧಿ ಜಯಂತಿ ಆಚರಣೆ ಮತ್ತು ಪಂಚಾಯತ್ ಪಿ ಡಿ ಓ ರಾಗಿದ್ದ ಮಹದೇವ ಪ್ರಭು ಕೆ. ವಿ ಯವರಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು.



ಹಲವು ವರ್ಷಗಳಿಂದ ಪಿ ಡಿ ಒ ಆಗಿ ಪೆರಾಜೆ ಗ್ರಾಮ ಪಂಚಾಯತ್ ನಲ್ಲಿ ಸೇವೆಯನ್ನು ಸಲ್ಲಿಸಿದ ಮಹಾದೇವ ಪ್ರಭು ಚಾಮರಾಜನಗರಕ್ಕೆ ವರ್ಗಾವಣೆ ಯಾಗಿದ್ದು, ಅವರಿಗೆ ಬೀಳ್ಕೊಡುಗೆ ಕಾರ್ಯಕ್ರಮವನ್ನು , ಗಾಂಧೀ ಜಯಂತಿ ದಿನದಂದು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಸರ್ವ ಸದಸ್ಯರುಗಳು ಮತ್ತು .ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಶ್ರೀ ನಾಗೇಶ್ ಕುಂದಲ್ಪಾಡಿ ಶಿಕ್ಷಣ ಇಲಾಖೆ ಯ ಸಿ ಆರ್ ಪಿ ರೇಖಾ ರವರು…ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲೋಕೇಶ್ ಹೊದ್ದೆಟ್ಟಿ , ಪಂಚಾಯತಿ ಸಿಬಂದಿ ವರ್ಗದವರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು…

