
ಈದ್ ಮಿಲಾದ್ ಮೆರವಣಿಗೆ ವೇಳೆ ಮಂಗಳೂರು ವೀರರಾಣಿ ಅಬ್ಬಕ್ಕ ಸರ್ಕಲ್ ಹತ್ತಿ ಹಸಿರು ಬಾವುಟ ಪ್ರದರ್ಶಿಸಿ ಪುಂಡಾಟ ಮೆರೆದ ಯುವಕರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಆಕ್ರೋಶಕ್ಕೆ ಕಾರಣವಾಗಿದೆ. ಸದ್ಯ ಉಳ್ಳಾಲ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ವಿಡಿಯೋ ಆಧರಿಸಿ ಯುವಕರನ್ನು ಪತ್ತೆ ಹಚ್ಚಿ ನೋಟಿಸ್ ಜಾರಿ ಮಾಡಿದ್ದಾರೆ.


ಸೆಪ್ಟೆಂಬರ್ 28 ರಂದು ಈದ್ ಮಿಲಾದ್ ಮೆರವಣಿಗೆ ವೇಳೆ ಉಳ್ಳಾಲದಲ್ಲಿ ಜಾಥಾ ನಡೆಸಿದ್ದ ಮುಸ್ಲಿಂ ಯುವಕರು ನಿಷೇಧಿತ ಸೈಲೆನ್ಸರ್ ಮತ್ತು ಹಾರ್ನ್ಗಳನ್ನು ಬಳಸಿ ಇಡೀ ರಸ್ತೆಯನ್ನು ಬಂದ್ ಮಾಡಿದ್ದರು. ಅಲ್ಲದೆ, ಉಳ್ಳಾಲದ ಅಬ್ಬಕ್ಕ ರಾಣಿಯ ಸರ್ಕಲ್ ಮೇಲೇರಿ ಹಸಿರು ಬಾವುಟ ಹಾರಿಸುತ್ತ ಚೀರಾಡುತ್ತಾ ಪುಂಡಾಟ ಮೆರೆದಿದ್ದರು. ಪೊಲೀಸರ ಎದುರಲ್ಲೇ ನಡೆದಿದ್ದ ಆ ಘಟನೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಕೇಳಿಬಂದಿತ್ತು.
ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ವಿಡಿಯೋ ಗಮನಿಸಿದ ಉಳ್ಳಾಲ ಠಾಣಾ ಪೊಲೀಸರು ಆಲರ್ಟ್ ಆಗಿದ್ದು, ವಿಡಿಯೋ ಆಧರಿಸಿ ಯುವಕರನ್ನು ಪತ್ತೆ ಹಚ್ಚಿದ್ದಾರೆ. ಪುಂಡಾಟ ಮೆರೆದವರು ಮಂಜನಾಡಿ, ಮದಕ,ಕೋಟೆಕಾರು, ಬಂಟ್ವಾಳ, ಬೆಳ್ತಂಗಡಿ, ದೇರಳಕಟ್ಟೆ, ಕೊಣಾಜೆ ಹಾಗೂ ಉಳ್ಳಾಲ ಭಾಗದ ಯುವಕರು ಎಂದು ತಿಳಿದುಬಂದಿದೆ.
ಸದ್ಯ ಉಳ್ಳಾಲ ಪೊಲೀಸ್ ಠಾಣಾಧಿಕಾರಿ ಯುವಕರಿಗೆ ನೋಟೀಸ್ ಜಾರಿ ಮಾಡಿ ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ಜಾರಿ ಮಾಡಿದ್ದಾರೆ. ಶಿವಮೊಗ್ಗದಲ್ಲೂ ಇಂತಹದ್ದೇ ಘಟನೆ ನಡೆದಿತ್ತು