ಉಳ್ಳಾಲ : ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೆ ಶರಣಾದ ಸಿಟಿ ಬಸ್ ಚಾಲಕ

ಉಳ್ಳಾಲ : ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೆ ಶರಣಾದ ಸಿಟಿ ಬಸ್ ಚಾಲಕ

ಡಿ.19 ಸೋಮೇಶ್ವರ ಸಮುದ್ರ ತೀರದಲ್ಲಿ ಸಿಟಿ ಬಸ್ ಚಾಲಕನೊಬ್ಬ ಸಮುದ್ರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತರನನ್ನು ಕೊಂಡಾಣ ಬೆಳರಿಂಗೆ ನಿವಾಸಿ ವೆಂಕಪ್ಪ ಶೆಟ್ಟಿ ಎಂಬವರ ಪುತ್ರ ಜಗದೀಶ್ (39) ಎಂದು ಗುರುತಿಸಲಾಗಿದೆ.

ಜಗದೀಶ್ ಸ್ಟೇಟ್ ಬ್ಯಾಂಕ್ ಕಿನ್ಯಾ ನಡುವೆ ಚಲಿಸುವ ಸಿಟಿ ಬಸ್ ನಲ್ಲಿ ಚಾಲಕರಾಗಿದ್ದು, ಇಂದು ನಸುಕಿನ ಜಾವ ಸೋಮೇಶ್ವರ ರುದ್ರಪಾದೆಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೃತ್ಯ ಎಸಗುವ ಮುನ್ನ ಸಮುದ್ರ ತೀರದಲ್ಲಿ ಬೈಕನ್ನು ಇಟ್ಟು ಟವಲೊಂದರಲ್ಲಿ ಬೈಕ್ ಕೀ, ಪರ್ಸ್‌ ಚಪ್ಪಲಿಗಳನ್ನು ಇಟ್ಟು ಸಮುದ್ರಕ್ಕೆ ಹಾರಿದ್ದಾರೆ. ಅವಿವಾಹಿತರಾಗಿರುವ ಜಗದೀಶ್ ಅವರ ಪರ್ಸ್ ನಲ್ಲಿ ಚಿನ್ನ ಅಡವಿಟ್ಟ ಚೀಟಿ, ಬ್ಯಾಂಕ್ ಖಾತೆಗೆ ಹಣ ವರ್ಗಾಯಿಸಿದ ಚೀಟಿಗಳು ಪತ್ತೆಯಾಗಿವೆ.

ರಾಜ್ಯ