
ಬಂಟ್ವಾಳದಲ್ಲಿ ಕಾಸರಗೋಡು ಮೂಲದ ವ್ಯಕ್ತಿಯೋರ್ವ ಬಸ್ ನಲ್ಲಿ ಪ್ರಯಾಣಿಕನೋರ್ವನ ಪಿಕ್ ಪಾಕೆಟ್ ಮಾಡಿ ಪರಾರಿಯಾಗಲು ಯತ್ನಿಸಿದ ವೇಳೆ ಕರ್ತವ್ಯ ನಿರತ ಟ್ರಾಫಿಕ್ ಪೋಲೀಸ್ ಸಿಬ್ಬಂದಿ ಹಿಡಿದು ಪೋಲೀಸ್ ಠಾಣೆಗೆ ಒಪ್ಪಿಸಿದ ಘಟನೆ ಬಿಸಿರೋಡಿನಲ್ಲಿ ನಡೆದಿದೆ.
ಕಾಸರಗೋಡು ಜಿಲ್ಲೆಯ ಉದುಮಾ ನಿವಾಸಿ ನಜೀರ್ ಎಂಬವನು ಪಿಕ್ ಪಾಕೆಟ್ ಮಾಡಿದ ಆರೋಪಿ . ಈತ ಬಸ್ ನಲ್ಲಿ ಪ್ರಯಾಣ ಮಾಡುತ್ತಿದ್ದ ಪುತ್ತೂರು ನಿವಾಸಿ ಕರುಣಾಕರ ಎಂಬವರು ಬಿಸಿರೋಡಿನಿಂದ ಪುತ್ತೂರಿಗೆ ತೆರಳುವುದಕ್ಕೆ ಬಿಸಿರೋಡಿನಲ್ಲಿ ಖಾಸಗಿ ಬಸ್ ಹತ್ತಿದ್ದರು.ಬಸ್ ತುಂಬಾ ಪ್ರಯಾಣಿಕರು ಇದ್ದ ಕಾರಣ ಕರುಣಾಕರರು ನಿಂತುಕೊಂಡಿದ್ದರು.ಇದೇ ಸಂದರ್ಭದಲ್ಲಿ ಬಸ್ ನಲ್ಲಿದ್ದ ಕದೀಮ ನಜೀರ್ ಎಂಬಾತ ಬಸ್ ಬಿಸಿರೋಡಿನಿಂದ ಪಾಣೆಮಂಗಳೂರು ತಲುಪುತ್ತಿದ್ದಂತೆ ಕರುಣಾಕರ ಅವರ ಪ್ಯಾಂಟ್ ನ ಹಿಂಬದಿಯಲ್ಲಿ ಇರಿಸಿದ್ದ ಹಣದ ಪರ್ಸ್ ನ್ನು ಕಿತ್ತುಕೊಂಡು ಬಸ್ಸ್ನಿಂದ ಇಳಿದಿದ್ದಾನೆ.
ಕಳ್ಳ ಪರ್ಸ್ ಎಗರಿಸುವುದನ್ನು ಬಸ್ ನೊಳಗಿದ್ದ ಪ್ರಯಾಣಿಕನೋರ್ವ ನೋಡಿದ್ದು,ಕೂಡಲೇ ಕರುಣಾಕರ ಅವರಿಗೆ ತಿಳಿಸಿದ್ದಾನೆ.ಕಳ್ಳ ಬಸ್ ನಿಂದ ಇಳಿದು ಹೋಗುವುದನ್ನು ಗಮನಿಸಿ ಕರುಣಾಕರ ಕೂಡ ಬಸ್ಸಿನಿಂದ ಇಳಿದಿದ್ದಾರೆ.ಅದಾಗಲೇ ನಜೀರ್ ಇನ್ನೊಂದು ಕೆ.ಎಸ್.ಆರ್.ಟಿ.ಸಿ.ಬಸ್ಸ್ ಹತ್ತಿ ಬಿಸಿರೋಡು ಕಡೆಗೆ ತೆರಳಿದ್ದಾನೆ.
ಕರುಣಾಕರು ಖಾಸಗಿ ಬಸ್ಸ್ ನಲ್ಲಿ ಬಿಸಿರೋಡಿನ ಕಡೆ ತೆರಳಿದ್ದಾರೆ. ತನ್ನ ಸಂಬಂಧಿಕರೋರ್ವರ ಮೂಲಕ ಕರುಣಾಕರರು ಬಿಸಿರೋಡಿನ ಪಾಯಿಂಟ್ ನಲ್ಲಿದ್ದ ಪೋಲೀಸ್ ಸಿಬ್ಬಂದಿ ರಾಕೇಶ್ ಎಂಬವರಿಗೆ ನಡೆದ ವಿಚಾರ ತಿಳಿಸಿದ್ದ ಬಸ್ ನಲ್ಲಿ ಬಿಸಿರೋಡು ಕಡೆಗೆ ಬರುವುದನ್ನು ತಿಳಿಸಿದ್ದಾರೆ. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸ್ ಸಿಬ್ಬಂದಿ ಕಳ್ಳನನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

