
ಸುಳ್ಯ ಭಸ್ಮಡ್ಕದ ಸಮೀಪ ಪಯಸ್ವಿನಿ ನದಿಗೆ ಸ್ನಾನಕ್ಕೆಂದು ತೆರಳಿದ ಮೂವರು ಯುವಕರ ಪೈಕಿ ಓರ್ವ ನೀರಿನಲ್ಲಿ ಮುಳುಗಿ ಸಾವನಪ್ಪಿದ ದಾರುಣ ಘಟನೆ ಇಂದು ನಡೆದಿದೆ .ಇದೀಗ ಯುವಕನನ್ನು ಉಪ್ಪಳ ಮೂಲದ ಸಮೀರ್ ಎಂದು ಗುರುತಿಸಲಾಗಿದೆ.ಈತ ಸುಳ್ಯದ ಕುರುಂಜಿಬಾಗ್ನಲ್ಲಿರುವ ವಿಶನ್ ಆಪ್ಟಿಕಲ್ಸ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಸುಳ್ಯದಲ್ಲಿ ರೂಮ್ ಮಾಡಿಕೊಂಡು ವಾಸವಾಗಿದ್ದರು.
ಇಂದು ಸಂಸ್ಥೆಗೆ ರಜೆ ಇದ್ದ ಹಿನ್ನಲೆಯಲ್ಲಿ ಬಟ್ಟೆ ತೊಳೆಯಲು ಮತ್ತು ಸ್ನಾನಕ್ಕೆಂದು ಮೂವರು ಗೆಳೆಯರೊಂಂದಿಗೆ ಪಯಸ್ವಿನಿ ನದಿಗೆ ತೆರಳಿದ್ದ ಎಂದು ಹೇಳಲಾಗಿದೆ. ಮೂವರು ಯುವಕರು ನೀರಿನಲ್ಲಿ ಸ್ನಾನ ಮಾಡುತ್ತಿದ್ದಾಗ ಸಮೀರ್ ನೀರಿನಲ್ಲಿ ಮುಳುಗಿದ್ದಾನೆನ್ನಲಾಗಿದೆ. ಸುಳ್ಯ ಆರಕ್ಷಕ ಠಾಣೆ , ಅಗ್ನಿಶಾಮಕ ದಳ ಸಿಬ್ಬಂದಿ ಶೋಧ ನಡೆಸಿ ಮೃತ ದೇಹವನ್ನು ಪತ್ತೆ ಹಚ್ಚಿದ್ದಾರೆ. ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

