
ಸುಳ್ಯದಲ್ಲಿ ಪ್ರಥಮ ಕೃಷಿ ಪರಿಕರಗಳ ಮಳಿಗೆ ಭಾರತ್ ಆಗ್ರೋ ಸರ್ವೀಸಸ್ ಆ್ಯಂಡ್ ಸಪ್ಲೈಸ್ 50 ವರ್ಷ ಪೂರೈಸಿದ ಹಿನ್ನಲೆಯಲ್ಲಿ ಮಾ.7 ರಂದು ಶ್ರೀ ಚೆನ್ನಕೇಶವ ದೇವಸ್ಥಾನದ ಮುಂಭಾಗದಲ್ಲಿ’ಆಗೋ ಸುವರ್ಣ ಸಂಭ್ರಮ’ ನಡೆಯಲಿದೆ, ಎಂದು ಸಂಸ್ಥೆ ಮಾಲಕರಾದ ರಾಮಚಂದ್ರ ಪಿ. ಹೇಳಿದ್ದಾರೆ.ಸುಳ್ಯ ಪ್ರೆಸ್ ಕ್ಲಬ್ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು1974 ರಲ್ಲಿ ಆರಂಭಿಸಿ ಈ ವರ್ಷದಲ್ಲಿ 50 ವರ್ಷಗಳು ಪೂರ್ತಿಯಾಗಿದ್ದು ಸುವರ್ಣ ಮಹೋತ್ಸವ ಸಂಭ್ರಮದಲ್ಲಿದೆ. ಊರಿನ ಎಲ್ಲಾ ಕೃಷಿಕರ ಸಹಕಾರದಲ್ಲಿ ಐವತ್ತು ವರ್ಷ ಸಂಸ್ಥೆ ಮುನ್ನಡೆದಿದೆ.ಹಾಗಾಗಿ ಎಲ್ಲರನ್ನು ಆಹ್ವಾನಿಸಿ ಸುವರ್ಣ ಸಂಭ್ರಮ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ,ಎಂದು ಕಾರ್ಯಕ್ರಮದ ವಿವರ ತಿಳಿಸಿದರು.

ಅಪರಾಹ್ನ 3.30 ರಿಂದ ರಾತ್ರಿ 9.00ರ ವರೆಗೆ ನಡೆಯಲಿರುವ ಸುವರ್ಣ ಸಂಭ್ರಮ ಕಾರ್ಯಕ್ರಮವನ್ನು ಬಹಳ ಅರ್ಥಪೂರ್ಣವಾಗಿ ಆಯೋಜಿಸಲಾಗಿದ್ದು ಆಗ್ರೋ ಕೃಷಿ ಚಿಂತನ’ಅಪರಾಹ್ನ 3.30 ಕ್ಕೆ ಸರಿಯಾಗಿಭಾರತದ ಪ್ರಸಿದ್ಧ ಪರಿಸರ ತಜ್ಞ ಡಾ.ಆರ್.ಕೆ.ನಾಯರ್ ಇವರ ಅಧ್ಯಕ್ಷತೆಯಲ್ಲಿ ಆಗ್ರೋ ಕೃಷಿ ಚಿಂತನ’ ಎಂಬ ಕಾರ್ಯಕ್ರಮ ನಡೆಯಲಿದ್ದು ನಾಡಿನ ಅನುಭವಿ ಕೃಷಿತಜ್ಞರಿಂದ ಕೃಷಿಯ ಬಗೆಗಿನ ವಿಶೇಷ ಮಾಹಿತಿ ಉಪನ್ಯಾಸ ನಡೆಯಲಿದೆ. ಸ್ವಯಂಚಾಲಿತ ನೀರಾವರಿ ವಿಧಾನದ ಬಗ್ಗೆ ಅನಂತ ರಾಮಕೃಷ್ಣ ಪೆರುವಾಯಿ,ಕನಿಷ್ಠ ನೀರಿನಲ್ಲಿ ಅಡಿಕೆ ಕೃಷಿ ಬಗ್ಗೆ ಪ್ರವೀಣ ಕೇಶವಮೈರುಗ ಕುರುಡಪದವು ಹಾಗೂ ಟ್ಯಾಂಕ್ಗಳ ಬಳಕೆ ಮಳೆ ಕೊಯ್ದು ವಿಷಯದ ಬಗ್ಗೆ ಮುರಳೀಧರ ಬಂಗಾರಡ್ಕ ಮಾತಾಡಲಿದ್ದಾರೆ. ವಿಶೇಷ ಕೃಷಿ ಚಿಂತನದಲ್ಲಿ ಪ್ರಕೃತಿ- ಯಂತ್ರ- ಬದುಕು ವಿಚಾರದಲ್ಲಿ ಡಾ.ಆರ್.ಕೆ.ನಾಯರ್ ಮಾತಾಡಲಿದ್ದಾರೆ.
ಸುವರ್ಣ ಸಂಭ್ರಮದ ಉದ್ಘಾಟನೆ: ಸಂಜೆ 5 ಗಂಟೆಗೆ ಸುವರ್ಣ ಸಂಭ್ರಮದ ಉದ್ಘಾಟನೆ ನಡೆಯಲಿದೆ.ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ನ ಅಧ್ಯಕ್ಷರಾದ ಡಾ.ಕೆ.ವಿ.ಚಿದಾನಂದ ಅಧ್ಯಕ್ಷತೆ ವಹಿಸುವರು. ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಆಗ್ರೋ ಸುವರ್ಣ ಸಂಭ್ರಮವನ್ನು ಉದ್ಘಾಟಿಸಲಿದ್ದಾರೆ. ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದ ಆನುವಂಶಿಕ ಆಡಳಿತ ಮುಖ್ಯಸ್ಥರಾದ ಡಾ.ಟಿ.ಹರಪ್ರಸಾದ್ ಶುಭಾಶಂಸನೆಗೈಯ್ಯಲಿದ್ದಾರೆ. ಇದೇ ಸಂದರ್ಭದಲ್ಲಿ ಪತ್ರಕರ್ತ ದುರ್ಗಾಕುಮಾರ್ ನಾಯರ್ ಕೆರೆ ನಿರ್ದೇಶನ ಸಾಕ್ಷ್ಯ ಚಿತ್ರವನ್ನು ರೋಟರಿ ಜಿಲ್ಲಾ ಮಾಜಿ ಗವರ್ನರ್ ಸುರೇಶ್ ಚಂಗಪ್ಪ ಬಿಡುಗಡೆಗೊಳಿಸಲಿದ್ದಾರೆ.
ಐವತ್ತು ವರ್ಷದ ಆಗ್ರೋ ಸಾಧನೆಯ ಅವಲೋಕನವನ್ನು ಲಯನ್ಸ್ ಜಿಲ್ಲಾ ಮಾಜಿ ಗವರ್ನರ್ ಎಂ.ಬಿ.ಸದಾಶಿವ ಮಾಡಲಿದ್ದಾರೆ.ಮುಖ್ಯ ಅತಿಥಿಗಳಾಗಿ ಸುಳ್ಯ ವರ್ತಕರ ಸಂಘದ ಅಧ್ಯಕ್ಷ ಪಿ.ಬಿ.ಸುಧಾಕರ ರೈ, ಸುಳ್ಯ ರೋಟರಿ ಕ್ಲಬ್ಅಧ್ಯಕ್ಷ, ಆನಂದ ಖಂಡಿಗ ಹಾಗೂ ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.ಆಗ್ರೋ ಸುವರ್ಣ ಸಂಭ್ರಮ ಉದ್ಘಾಟನಾ ಸಂದರ್ಭದಲ್ಲಿ ಗೌರವ ಸನ್ಮಾನ ನೀಡಲಾಗುವುದು. ಪದ್ಮಶ್ರೀ ಪುರಸ್ಕೃತ ತೂಗು ಸೇತುವೆಗಳ ಸರದಾರ ಭಾರದ್ವಾಜ್ , ಗ್ರೀನ್ ಗೀರೋ ಆಫ್ ಇಂಡಿಯಾ ಡಾ.ಆರ್.ಕೆ.ನಾಯರ್, ಹಿರಿಯ ಪ್ರಗತಿಪರ ಕೃಷಿ ಕಸುಬ್ರಾಯ ಭಟ್ ಮಾಪಲತೋಟ, ಗೋಣಿಕೊಪ್ಪಕಾವೇರಿ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಎಂ.ಗೌರಿ ಶಂಕರ್ ಹಾಗೂ ಹಿರಿಯ ಕೃಷಿಕರಾದ ಸಂಪಾಜೆಯ ಶಂಕರ್ ಪ್ರಸಾದ್ ರೈ ಇವರನ್ನು ಸನ್ಮಾನಿಸಿ ಗೌರವಿಸಲಾಗುವುದುಸಂಜೆ: ಸಾಂಸ್ಕೃತಿಕ ಕಲಾ ವೈಭವ ನಡೆಯಲಿದೆ. ರಂಗ ನಿರ್ದೇಶಕ ಡಾ.ಜೀವನ್ ರಾಂ ಸುಳ್ಯ ಸಂಯೋಜನೆಯಲ್ಲಿ ಸಂಜೆ 7.00 ಕ್ಕೆ ಎಸ್.ಡಿ.ಯಂ.ಶಿಕ್ಷಣ ಸಂಸ್ಥೆ ಉಜಿರೆ ಇಲ್ಲಿನ ಸುಮಾರು 160 ಕ್ಕಿಂತಲೂ ಹೆಚ್ಚು ಕಲಾವಿದರಿಂದ ಸಾಂಸ್ಕೃತಿಕ ಕಲಾ ವೈಭವ ನಡೆಯಲಿದೆ.
ಕೇರಳದ ಮೋಹಿನಿಯಾಟ್ಟಂ, ಗುಜರಾತ್ ನ ದಾಂಡಿಯಾ- ಗರ್ಭನೃತ್ಯ ಒರಿಸ್ಸಾದ ಒಡಿಸ್ಸಿ, ಕರಾವಳಿಯ ಯಕ್ಷಗಾನಬ್ಯಾಲೆಟ್, ಭರತನಾಟ್ಯ ಶಿವತಾಂಡವ ರೂಪಕ, ಸ್ಪಾನಿಶ್ ಪ್ಲೆಮೆಂಕೋ ಕ್ರಿಯೇಟಿವ್ ಡ್ಯಾನ್ಸ್, ಸೆಮಿಕ್ಲಾಸಿಕಲ್ ಡ್ಯಾನ್ಸ್ ಕೇರಳದ ತೆಯ್ಯಂ ಆಧಾರಿತ ನರಸಿಂಹಾವತಾರ, ಶ್ರೀರಾಮ ಪಟ್ಟಾಭಿಷೇಕ ವಿಶೇಷ ನೃತ್ಯ ರೂಪಕ ಮುಂತಾದ ವೈವಿಧ್ಯಮಯ ಕಾರ್ಯಕ್ರಮಗಳು ನಡೆಯಲಿದೆ ಎಂದು ಅವರು ವಿವರಿಸಿದರು.ಸುದ್ದಿಗೋಷ್ಠಿಯಲ್ಲಿ ಸುಳ್ಯ ರೋಟರಿ ಕ್ಲಬ್ ಅಧ್ಯಕ್ಷ ಆನಂದ ಖಂಡಿಗ, ರೊ| ಪ್ರಭಾಕರ ನಾಯರ್, ರೊ| ದಳ ಸುಬ್ರಾಯ ಭಟ್, ರೊ| ಡಾ. ಕೇಶವ ಪಿ ಕೆ, ರೊ| ಡಾ. ಪುರುಷೋತ್ತಮ ಕೆ ಜಿ. ಮೊದಲಾದವರಿದ್ದರು.