
ಎ22.ರಂದು ಸುಳ್ಯ ತಾಲೂಕಿನಲ್ಲಿ ಸುರಿದ ಭಾರಿ ಮಳೆಗೆ ಅಲ್ಲಲ್ಲಿ ಹಾನಿ ಉಂಟಾಗಿದೆ. ಆಲೆಟ್ಟಿ ಪಂಚಾಯತ್ ವ್ಯಾಪ್ತಿಯ ತಲೆಪಳ ಎಂಬಲ್ಲಿ ಮನೆಯ ಮೇಲೆ ಮರ ಬಿದ್ದು ಅಪಾರ ಹಾನಿಯುಂಟಾಗಿದೆ

ಆನಂದ ನಾಯ್ಕರವರವರ ಮನೆಗೆ ಮರ ಬಿದ್ದಿದ್ದು ಘಟನೆ ಸಂಭವಿಸುವ ಸಂದರ್ಭದಲ್ಲಿ ಯಾರು ಇಲ್ಲದೆ ಇದ್ದುದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ತೆರಳಿದ ಆಲೆಟ್ಟಿ ಪಂಚಾಯತ್ ಸದಸ್ಯಸತ್ಯಕುಮಾರ್ ಆಡಿಂಜ ಹಾಗೂ ಸ್ಥಳೀಯರು ಸೇರಿ ಮರ ತೆರವುಗೊಳಿಸುವಲ್ಲಿ ಪ್ರಯತ್ನಿಸಿದರು.
