
ಪುತ್ತೂರು ಮೇ 06: ಕಾರಿಗೆ ಸೈಡ್ ಕೊಡದ ವಿಚಾರಕ್ಕೆ ಸರಕಾರಿ ಬಸ್ ಚಾಲಕನ ಮೇಲೆ ಕಾರಿನಲ್ಲಿದ್ದ ವ್ಯಕ್ತಿಗಳು ಹಲ್ಲೆ ನಡೆಸಿದ ಘಟನೆ ಬಂಟ್ವಾಳದ ದಾಸರಕೋಡಿ ಎಂಬಲ್ಲಿ ಘಟನೆ ನಡೆದಿದ್ದು, ಘಟನೆಯ ವಿಡಿಯೋ ವೈರಲ್ ಆಗಿದೆ.

ಕೆಎಸ್ ಆರ್ ಟಿಸಿ ಬಸ್ ಚಾಲಕ ಕಾರಿಗೆ ಸೈಡ್ ಕೊಡಲಿಲ್ಲ ಎಂದು ಆರೋಪಿದ ಕಾರಿನಲ್ಲಿದ್ದ ಯುವಕರು ಚಾಲಕನನ್ನು ಬಸ್ ನಿಂದ ಹೊರಗೆಳೆದು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಹಲ್ಲೆ ನಡೆಸಿದ ಆರೋಪಿಗಳ ಮೇಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
