ಸರಕಾರಿ ಶಾಲೆಗಳೆಂದರೆ ಮೂಗು ಮುರಿಯುವವರೇ ಹೆಚ್ಚು,ಆದರೆ ಇಲ್ಲೊಂದು ಸರಕಾರಿ ಶಾಲೆಯ 10ನೇ ತರಗತಿಯಲ್ಲಿ ಒಬ್ಬಳೇ ವಿದ್ಯಾರ್ಥಿನಿ ಇದ್ದರೂ ಶಿಕ್ಷಕರು ನಿರ್ಲಕ್ಷ್ಯ ಮಾಡದೆ ಮನಮುಟ್ಟುವಂತೆ ಪಾಠ ಮಾಡಿ ಆಕೆ ತೇರ್ಗಡೆಯಾಗುವಂತೆ ಮಾಡಿದ್ದಾರೆ.


ಕೊಡಗಿನ ಕುಗ್ರಾಮಗಳಲ್ಲಿ ಒಂದಾದ ಸೋಮವಾರಪೇಟೆ ತಾಲ್ಲೂಕಿನ ಸೂರ್ಲಬ್ಬಿಯ ಸರಕಾರಿ ಪ್ರೌಢ ಶಾಲೆಯ ಏಕೈಕ ವಿದ್ಯಾರ್ಥಿನಿ ತೇರ್ಗಡೆಯಾಗುವುದರೊಂದಿಗೆ ಶಾಲೆಗೆ ಶೇ.100.ಫಲಿತಾಂಶ ಲಭಿಸಿದೆ. ಗ್ರಾಮೀಣ ಭಾಗದ ಶಾಲೆಗಳಲ್ಲಿ ದಿನದಿಂದ ದಿನಕ್ಕೆ ದಾಖಲಾತಿ ಕುಸಿಯುತ್ತಿದೆ. ಇದೇ ಪರಿಸ್ಥಿತಿ ಸೂರ್ಲಬ್ಬಿ ಸರಕಾರಿ ಶಾಲೆಯಲ್ಲೂ ಇದ್ದು, 8, 9 ಮತ್ತು 10 ನೇ ತರಗತಿಗಳಲ್ಲಿ ಒಟ್ಟು 7 ವಿದ್ಯಾರ್ಥಿಗಳು ಮಾತ್ರ ಅಭ್ಯಾಸಮಾಡುತ್ತಿದ್ದರು. 10ನೇ ತರಗತಿಯಲ್ಲಿದ್ದ ..ವಿದ್ಯಾರ್ಥಿನಿಯಾಗಿದ್ದ ಯು.ಎಸ್.ಮೀನ ಈ ಬಾರಿಯ ಪರೀಕ್ಷೆಯಲ್ಲಿ 314 ಅಂಕಗಳನ್ನು ಗಳಿಸಿ ತೇರ್ಗಡೆ ಹೊಂದಿದ್ದಾಳೆ

.
ಮಡಿಕೇರಿ ತಾಲ್ಲೂಕಿನ ಮುಟ್ಟು ಗ್ರಾಮದಿಂದ 5 ಕಿ.ಮೀದೂರದ ಶಾಲೆಗೆ ನಡೆದುಕೊಂಡು ಬರುತ್ತಿದ್ದ ಮೀನಾಳಿಗೆ ಶಿಕ್ಷಕ ವೃಂದ ಹೆಚ್ಚು ಪ್ರೋತ್ಸಾಹ ನೀಡುತ್ತಿದ್ದರು.ಅಭಿಪ್ರಾಯ ಹಂಚಿಕೊಂಡ ಶಾಲೆಯ ಮುಖ್ಯ ಶಿಕ್ಷಕ ರವೀಂದ್ರ ತಿಮ್ಮಪ್ಪ ಅಂಟರದಾನಿ ಗ್ರಾಮೀಣ ಜನರು ಬೆಂಗಳೂರು ಇತ್ಯಾದಿ ಕಡೆ ಉದ್ಯೋಗ ಅರಸಿ ತೆರಳುತ್ತಿರುವುದರಿಂದ ಈ ಶಾಲೆಯಲ್ಲಿ ಮಕ್ಕಳ ಸಂಖ್ಯೆ ತೀವ್ರವಾಗಿ ಕುಸಿದಿದೆ. ಬರುವ ಶೈಕ್ಷಣಿಕ ವರ್ಷಕ್ಕೆ 10ನೇ ತರಗತಿಗೆ ನಾಲ್ವರು ವಿದ್ಯಾರ್ಥಿಗಳು ಹಾಗೂ 9 ನೇ ತರಗತಿ ಮತ್ತು 8 ನೇ ತರಗತಿಗೆ ತಲಾ ಮೂವರು ವಿದ್ಯಾರ್ಥಿಗಳು ಪ್ರವೇಶ ಪಡೆಯಲಿದ್ದು, ಒಟ್ಟು 10. ವಿದ್ಯಾರ್ಥಿಗಳು ದಾಖಲಾಗಲಿದ್ದಾರೆ .

