ಪಶ್ಚಿಮ ಬಂಗಾಳದ ಕರಾವಳಿಗೆ ಅಪ್ಪಳಿಸಿದ ರೆಮಲ್ ಚಂಡಮಾರುತ | ವಿಮಾನ ಹಾರಾಟ ರದ್ದು 

ಪಶ್ಚಿಮ ಬಂಗಾಳದ ಕರಾವಳಿಗೆ ಅಪ್ಪಳಿಸಿದ ರೆಮಲ್ ಚಂಡಮಾರುತ | ವಿಮಾನ ಹಾರಾಟ ರದ್ದು 

: ಇಂದು ಬೆಳಗ್ಗೆ ರೆಮಲ್ ಚಂಡಮಾರುತ ಪಶ್ಚಿಮ ಬಂಗಾಳದ ಕರಾವಳಿಗೆ ಬಂದು ಅಪ್ಪಳಿಸಿದ್ದು ಎಲ್ಲೆಡೆ ಭೂಕುಸಿತ ಉಂಟಾಗುತ್ತಿದೆ. ಇದರ ಪರಿಣಾಮ ಬಿಹಾರದ ಮೇಲೂ ಗೋಚರಿಸಿದೆ.

ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವಂತೆ ಬಂಗಾಳದಲ್ಲಿ ರೆಮಲ್ ಚಂಡಮಾರುತದ ಪ್ರಭಾವದ ಹಿನ್ನೆಲೆಯಲ್ಲಿ ಕೋಲ್ಕತ್ತಾ-ಪಾಟ್ನಾ ನಡುವೆ ಹಾರಾಟ ನಡೆಸುತ್ತಿದ್ದ ಎರಡು ವಿಮಾನಗಳನ್ನು ರದ್ದುಗೊಳಿಸಲಾಗಿದೆ. ಇದರಿಂದಾಗಿ 700ಕ್ಕೂ ಹೆಚ್ಚುಪ್ರಯಾಣಿಕರು ಪರದಾಡುವಂತಾಯಿತು. ಈಶಾನ್ಯದ ರಾಜ್ಯಗಳಲ್ಲಿ ಚಂಡಮಾರುತದ ಪ್ರಭಾವದಿಂದ ಮಳೆಯಾಗಲಿದೆ. ಈ ರಾಜ್ಯಗಳಲ್ಲಿ ಒಂದೆರಡು ದಿನ ಚಂಡಮಾರುತದ ಪ್ರಭಾವ ಇರಬಹುದು. ಸೋಮವಾರ ಹಾಗೂ ಮಂಗಳವಾರ ಅಸ್ಸಾಂ, ಮೇಘಾಲಯ, ಮಣಿಪುರ, ನಾಗಾಲ್ಯಾಂಡ್, ಅರುಣಾಚಲಪ್ರದೇಶ ಹಾಗೂ ತ್ರಿಪುರಾದಲ್ಲಿ ಭಾರಿ ಮಳೆಯ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಚಂಡಮಾರುತದ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದ ಸೂಕ್ಷ್ಮ ಪ್ರದೇಶಗಳಿಂದ ಒಂದು ಲಕ್ಷಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಹಾಗೆಯೇ ಅಪಾಯದ ಭೀತಿ ನಡುವೆ ಬಾಂಗ್ಲಾದೇಶದ ಸೂಕ್ಷ್ಮ ಪ್ರದೇಶಗಳಿಂದ ಎಂಟು ಲಕ್ಷಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.

ರಾಷ್ಟ್ರೀಯ